ರಾಜಕೀಯ ಗುರು ಎಸ್‌ಎಂ ಕೃಷ್ಣ ಭೇಟಿ ಮಾಡಿದ ಡಿಕೆಶಿ...ಕಾರಣ?

Published : Jan 01, 2019, 04:17 PM IST
ರಾಜಕೀಯ ಗುರು ಎಸ್‌ಎಂ ಕೃಷ್ಣ ಭೇಟಿ ಮಾಡಿದ ಡಿಕೆಶಿ...ಕಾರಣ?

ಸಾರಾಂಶ

ಹೊಸ ವರ್ಷ ಬಂದಿದ್ದದರೂ ರಾಜಕಾರಣದ ಚಟುವಟಿಕೆಗೆ ಮಾತ್ರ ಕೊನೆ ಇಲ್ಲ. ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮಾಜಿ ಸಿಎಂ ಎಸ್‌ ಎಂ ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು(ಜ.01) ಸಚಿವ ಡಿಕೆ ಶಿವಕುಮಾರ್ ತಮ್ಮ ಒಂದು ಕಾಲದ ರಾಜಕೀಯ ಗುರುಗಳಾದ ಎಸ್‌ ಎಂ ಕೃಷ್ಣ ಅವರನ್ನು ಭೇಟಿ ,ಮಾಡಿ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. 

ಎಸ್ ಎಂ ಕೃಷ್ಣ ಜೊತೆ ನನ್ನ ಸಂಬಂಧ ಬಗ್ಗೆ ಯಾರೂ ಪ್ರಶ್ನೆ ಮಾಡಕ್ಕಾಗಲ್ಲ. ನನಗೆ ಅವರು ತಂದೆ ಸಮಾನ. ರಾಜಕೀಯವಾಗಿ ಮಾರ್ಗದರ್ಶನ ತೋರಿದವರು. ಪ್ರತೀ ವರ್ಷ ನಾನು ಅವರ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಕೃಷ್ಣ ಬಿಜೆಪಿ ಸೇರಿದ್ದರು. ಸಹಜವಾಗಿಯೇ ಡಿಕೆಶಿ ಭೇಟಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ಸ್ಟೀಲ್ ಬ್ರಿಡ್ಜ್‌ ಅಂತಷ್ಟೇ ಅಲ್ಲ ಅದು ಏರ್ ಪೋರ್ಟ್ ಗೆ ಸಂಪರ್ಕ ಜನರಿಗೆ ಅನುಕೂಲವಾಗುವ ಯೋಜನೆ.  ಜನರಿಗೆ ಸಮಯ ಮುಖ್ಯ ಸಂಚಾರ ಸುಲಭ ಮಾಡುವುದು ನಮ್ಮ ಉದ್ದೇಶ. ವಿರೋಧ ಪಕ್ಷದವರ ವಿರೋಧ ನೋಡಿ ಕೆಲಸ ಮಾಡಕ್ಕಾಗುತ್ತಾ? ಮೊಸರಲ್ಲಿ ಕಲ್ಲು ಹುಡುಕೋರ ಮಾತನ್ನ ಗಂಭೀರ ವಾಗಿ ತಗೊಳ್ಳೊಕ್ಕಾಗುತ್ತಾ? ಸುಳ್ಳು ಆರೋಪ ಮಾಡಲಾಗಿತ್ತು ಸರ್ಕಾರಕ್ಕೆ ಬ್ಲಾಕ್ ಮೇಲ್ ಮಾಡಿ, ಹೆದರಿಸಿದರೆ ಆಗುತ್ತಾ? ತಪ್ಪಿದ್ರೆ ಹೇಳಲಿ ಸಲಹೆ ಕೊಡಲಿ.. ಯಾರು ಹರಿಶ್ಚಂದ್ರರಲ್ಲ ಎಂದು ಮತ್ತೆ ಚರ್ಚೆಗೆ ಬಂದಿರುವ ಸ್ಟೀಲ್ ಬ್ರಿಡ್ಜ್‌ ಪರ ಬ್ಯಾಟ್ ಬೀಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?