ತಮ್ಮ ನಡೆಗೆ ತಮ್ಮನೇ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

Published : Apr 24, 2019, 03:42 PM ISTUpdated : Apr 24, 2019, 05:33 PM IST
ತಮ್ಮ ನಡೆಗೆ ತಮ್ಮನೇ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಸಾರಾಂಶ

ಲೋಕಸಭಾ ಮಹಾ ಸಮರ ರಾಜ್ಯದಲ್ಲಿ ಮುಕ್ತಾಯವಾಗಿ ಫಲಿತಾಂಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. 

ಬೆಳಗಾವಿ :  ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ನಡುವಿನ ವಾಕ್ಸಮರ ದಿನೇ ದಿನೇ ಮಿತಿ ಮೀರುತ್ತಿದೆ. ಮೊನ್ನೆಯಷ್ಟೇ ಅಣ್ಣಾ ರಮೇಶ್ ಜಾರಕಿಹೊಳಿ ವಿರುದ್ಧ ತಮ್ಮ ಸತೀಶ್ ಜಾರಕಿಹೊಳಿ ಗುಡುಗಿದ್ದರು. ಇದೀಗ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. 

"

ನಾನು ಸದ್ಯ ಕಾಂಗ್ರೆಸ್ ಬಿಟ್ಟಿಲ್ಲ, ತಾಂತ್ರಿಕವಾಗಿ ಪಕ್ಷದಲ್ಲಿ ಇದ್ದೇನೆ. ಕತ್ತಲಲ್ಲಿ ಕುಳಿತು ಕಲ್ಲು ಎಸೆಯುವ ವ್ಯಕ್ತಿ ನಾನಲ್ಲ. ಭಿನ್ನಮತ ಆರಂಭಕ್ಕೆ ಸಚಿವ ಸತೀಶ ಜಾರಕಿಹೊಳಿಯೇ ಕಾರಣ. ಅವರು ಗೋಮುಖ ವ್ಯಾಘ್ರ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. 

ನಾನು ಸಚಿವನಾಗಿ ಅರಾಮ್ ಆಗಿ ಇದ್ದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಪ್ರಚೋದನೆ ಕೊಟ್ಟರು. ಬಂಡಾಯಕ್ಕೆ ಪ್ರಚೋದನೆ ನೀಡಿದ್ದೇ ಸತೀಶ್ ಜಾರಕಿಹೊಳಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಇನ್ನು ರಾಜೀನಾಮೆ ಬಗ್ಗೆಯೂ ಮಾತನಾಡಿದ ಅವರು ಬೆಂಬಲಿಗ ಶಾಸಕರ ಜೊತೆಗೆ ಚರ್ಚಿಸಿ ನಂತರ ಈ ಬಗ್ಗೆ ಹೇಳುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?