
ಬೆಂಗಳೂರು: ಎರಡು ಖಾತೆ ಹೊಂದಿರುವ ಸಚಿವರ ಖಾತೆಗಳಿಗೆ ಕತ್ತರಿ ಬೀಳುತ್ತಿದ್ದು, ಕಾಂಗ್ರೆಸ್ ಹಿರಿಯ ಸಚಿವರ ಖಾತೆ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಪ್ಲಾನ್ ಮಾಡಿದೆ.
ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಒಂದು ಖಾತೆ ಬಿಟ್ಟುಕೊಡಬೇಕು ಎಂದು ಸೂಚಿಸಿರುವ ಹೈಕಮಾಂಡ್, ಈ ಸಂಬಂಧ ಸೆಪ್ಟಂಬರ್ 1 ಮತ್ತು 2 ರಂದು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಿದೆ.
ಸಂಪುಟ ವಿಸ್ತರಣೆ, ಲೋಕಸಭಾ ಚುನಾವಣೆ ತಯಾರಿ ಕುರಿತು ಕೂಡ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೇ ಸರ್ಕಾರಕ್ಕೆ 100 ದಿನ ತುಂಬುತ್ತಿದ್ದು ಇದೇ ವೇಳೆ ಕಾಂಗ್ರೆಸ್ ಸಚಿವರ ಮೌಲ್ಯಮಾಪನವನ್ನೂ ಕೂಡ ಮಾಡಲಾಗುತ್ತದೆ. ಸಚಿವರ ಕಾರ್ಯ ವೈಖರಿ ಬಗ್ಗೆಯೂ ಕೂಡ ಚರ್ಚೆ ಮಾಡಲಾಗುತ್ತದೆ.
ಸಂಪುಟ ವಿಸ್ತರಣೆ ವೇಳೆ ಎರಡು ಖಾತೆ ಹೊಂದಿದವರು ಒಂದು ಖಾತೆ ಬಿಟ್ಟುಕೊಡಲು ಉಸ್ತುವಾರಿ ವೇಣುಗೋಪಾಲ್ ಅವರು ತಾಕೀತು ಮಾಡಲಿದ್ದಾರೆ. ತಾಕೀತು ಮಾಡಲಿರುವ ವೇಣುಗೋಪಾಲ್. ಕೆಪಿಸಿಸಿ ಯಲ್ಲಿ ಸಭೆ ನಡೆಯಲಿದ್ದು, ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಸಭೆಯಲ್ಲಿ ಭಾಗಿಯಾಗಲಿದ್ಧಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.