'ಹಳೆ ದಿನಾಂಕ ಹಾಕಿ ಮಂತ್ರಿಗಳ ಗೋಲ್ಮಾಲ್‌'

Published : Jul 16, 2019, 09:51 AM IST
'ಹಳೆ ದಿನಾಂಕ ಹಾಕಿ ಮಂತ್ರಿಗಳ ಗೋಲ್ಮಾಲ್‌'

ಸಾರಾಂಶ

ಹಳೇ ದಿನಾಂಕ ನಮೂದಿಸಿ ವರ್ಗಾವಣೆ, ಮುಂಬಡ್ತಿ ಹಾಗೂ ಅನುದಾನ ಬಿಡುಗಡೆ ಪ್ರಕ್ರಿಯೆಯಲ್ಲಿ ಸಚಿವರು ಅತ್ಯುತ್ಸಾಹದಿಂದ ತೊಡಗಿದ್ದಾರೆ. ಈ ರೀತಿ ಗೋಲ್ಮಾಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. 

ಬೆಂಗಳೂರು [ಜು.16]:  ವಿಶ್ವಾಸಮತ ಯಾಚನೆಗೆ ದಿನಾಂಕ ನಿಗದಿಯಾದ ಮೇಲೆ ಹಳೇ ದಿನಾಂಕ ನಮೂದಿಸಿ ವರ್ಗಾವಣೆ, ಮುಂಬಡ್ತಿ ಹಾಗೂ ಅನುದಾನ ಬಿಡುಗಡೆ ಪ್ರಕ್ರಿಯೆಯಲ್ಲಿ ಸಚಿವರು ಅತ್ಯುತ್ಸಾಹದಿಂದ ತೊಡಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾವುದೇ ಪ್ರಮುಖ ನಿರ್ಣಯ ತೆಗೆದುಕೊಳ್ಳಬಾರದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಸೂಚಿಸಿದ್ದಾರೆ. ಹೀಗಿದ್ದರೂ ಸಹ ಸಚಿವರು ವ್ಯವಹಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಬಹುಮತ ಸಾಬೀತಿಗೆ ಸ್ಪೀಕರ್‌ ದಿನಾಂಕ ನಿಗದಿ ಮಾಡಿದ ಮೇಲೆ ಎಲ್ಲಾ ಮಂತ್ರಿಗಳು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಹಿಂದಿನ ದಿನಾಂಕ ಬಳಸಿ ವರ್ಗಾವಣೆ ಮತ್ತು ಮುಂಬಡ್ತಿ ಹಾಗೂ ಅನುದಾನಗಳಿಗೆ ಆದೇಶ ಹೊರಡಿಸುತ್ತಿದ್ದಾರೆ. 

ಭ್ರಷ್ಟಾಚಾರದಲ್ಲಿ ಸಚಿವರು ಸಂಪೂರ್ಣವಾಗಿ ಮುಳುಗಿದ್ದಾರೆ. ಅವರು ಕಡತಗಳ ವಿಲೇವಾರಿ ವೇಗ ನೋಡಿದರೆ ಸರ್ಕಾರ ಉಳಿಯುವ ನಂಬಿಕೆಯೇ ಸಚಿವರಿಗೆ ಇಲ್ಲ ಎನ್ನುವಂತಿದೆ ಎಂದು ಲೇವಡಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: 1.8 ಲಕ್ಷ ಮಂದಿ ತೆರಿಗೆದಾರರು ‘ಗೃಹಲಕ್ಷ್ಮೀ’ ಫಲಾನುಭವಿಗಳು!
Karnataka High court: ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!