ಒಂದೇ ಏಟಿನಲ್ಲಿ 2 ಹಕ್ಕಿ ಹೊಡೆಯಲು ಪ್ಲಾನ್! ಬಿಜೆಪಿಯಿಂದ ಮೊದಲ ದಾಳ

Published : Jul 06, 2019, 03:11 PM ISTUpdated : Jul 06, 2019, 03:18 PM IST
ಒಂದೇ ಏಟಿನಲ್ಲಿ 2 ಹಕ್ಕಿ ಹೊಡೆಯಲು ಪ್ಲಾನ್! ಬಿಜೆಪಿಯಿಂದ ಮೊದಲ ದಾಳ

ಸಾರಾಂಶ

11 ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿದೆ. ಮೈತ್ರಿ ಸರ್ಕಾರ ಪತನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಬಿಜೆಪಿ ಮೊದಲ ದಾಳವನ್ನು ಪ್ರಯೋಗಿಸಿದೆ. 

ಬೆಂಗಳೂರು (ಜು.07): ಮೈತ್ರಿ ಸರ್ಕಾರದ 11 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಈಗ ಬಿಜೆಪಿಯು ಅಖಾಡಕ್ಕಿಳಿದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಹೈಡ್ರಾಮಾದಲ್ಲಿ ಮೊದಲ ದಾಳ ಪ್ರಯೋಗಿಸಿದೆ.

ರಾಜ್ಯ ರಾಜಕಾರಣದ ಪ್ರಸಕ್ತ ಬೆಳವಣಿಗೆಗಳ ಕುರಿತು ಮಾತನಾಡಿದ, ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸುವ ಮೂಲಕ ಬಿಜೆಪಿ ಎಂಟ್ರಿಯ ಸುಳಿವು ನೀಡಿದರು.

ಇದನ್ನೂ ಓದಿ | ಫಲಿಸದ ಡಿಕೆಶಿ ಮಾತುಕತೆ: 11 ಶಾಸಕರ ರಾಜೀನಾಮೆ! ರಾಜ್ಯಪಾಲರ ಆಟ ಶುರು!

ಕೇಂದ್ರ ಗೃಹ ಸಚಿವರು ಮಧ್ಯಪ್ರವೇಶ ಮಾಡಬೇಕು. ರಾಜ್ಯ ಸರ್ಕಾರದ ಮಾಹಿತಿಯನ್ನು ರಾಷ್ಟ್ರಪತಿಗಳಿಗೆ ನೀಡಬೇಕು ಎಂದು ಡಿ.ವಿ.ಸದಾನಂದಗೌಡ, ಗೃಹ ಮಂತ್ರಿಯೂ ಆಗಿರುವ ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಷಾಗೆ ಆಹ್ವಾನ ನೀಡಿದರು.

ಕಾನೂನಾತ್ಮಕವಾಗಿ ನಡೆದು ಕೊಳ್ಳುವ ಜಾಣ ನಡೆ ತೋರುತ್ತಿರುವ ಬಿಜೆಪಿಯು, ಆ ಮೂಲಕ ರಾಜ್ಯ ರಾಜಕಾರಣಕ್ಕೆ ಮಧ್ಯಪ್ರವೇಶಿಸಲು ಅಮಿತ್ ಷಾಗೆ ಎರಡೆರಡು ಅವಕಾಶ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ