ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ ಸರ್ಕಾರಕ್ಕೆ ಮುಜುಗರ ಉಂಟಾಗುವಂತೆ ಮಾಡಿದ್ದಾರೆ. ಈ ಕಾರಣದಿಂದಲೇ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಯಿತು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮುಂದೆ ಬಲವಾಗಿ ವಾದಿಸಿದೆ. ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದಡಿ ಬೆಂಗಳೂರು ನಗರ ಹೆಚ್ಚುವರಿ ಪೊಲಿಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿದ ಆದೇಶ ರದ್ದುಪಡಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ)ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕರ್ತವ್ಯ ಲೋಪ ಆರೋಪದ ಮೇಲೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಪಡಿಸಿದ ತನ್ನ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿತು.

11:46 PM (IST) Jul 18
ಮೂವರು ಗೆಳಯರ ಸಾಹಸದಿಂದ ಇದೀಗ ಜಿಲ್ಲೆಯ 800 ಮನೆಗೆ ಉಚಿತ ವಿದ್ಯುತ್ ಲಭ್ಯವಾಗಿದೆ. ದಿನದ 24 ಗಂಟೆಯೂ 800 ಮನೆಗಳಿಗೆ ಯಾವುದೇ ಅಡೆ ತಡೆ ಇಲ್ಲದೆ ವಿದ್ಯುತ್ ಲಭ್ಯವಾಗಿದೆ. ಈ ಮೂವರು ಗೆಳೆಯರು ಮಾಡಿದ ಕ್ರಾಂತಿಯೇನು?
10:58 PM (IST) Jul 18
ಧರ್ಮಸ್ಥಳದ ಮಾಜಿ ಕಾರ್ಮಿಕ ಎನ್ನಲಾದ ಅನಾಮಿಕ ವ್ಯಕ್ತಿ ಮಾಡಿದ ನೂರಾರು ಶವಗಳ ಹೂತಿಟ್ಟ ಆರೋಪ ಇದೀಗ ಕೋಲಾಹಲ ಸೃಷ್ಟಿಸಿದೆ. ಇದರ ನಡುವೆ ಅಡ್ವೋಕೇಟ್ ಕೆವಿ ಧನಂಜಯ್ ಕೆಲ ಸ್ಪಷ್ಟನೆ ನೀಡಿದ್ದಾರೆ.
09:56 PM (IST) Jul 18
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ ನೀಡಿದೆ. ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಭಕ್ತರಿಂದ ಹಣ ವಸೂಲಿ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಟಿಟಿಡಿ ಅಲರ್ಟ್ ನೀಡಿದೆ.
09:35 PM (IST) Jul 18
Good News for Tirumala Devotees: ಮಂಗಳೂರಿನಿಂದ ತಿರುಪತಿಗೆ ನೇರ ಬಸ್ ಸೇವೆ ಆರಂಭವಾಗಿದ್ದು, ಭಕ್ತರಿಗೆ ಅನುಕೂಲವಾಗಿದೆ. ಐರಾವತ ಕ್ಲಬ್ ಕ್ಲಾಸ್ ಬಸ್ ಹೊರಡಲಿದೆ.
09:16 PM (IST) Jul 18
ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಕಾರಣ ಇದೀಗ ಕೆಲ ಜಿಲ್ಲೆಗೆ ಎಚ್ಚರಿಕೆ ನೀಡಲಾಗಿದೆ. ವೀಕೆಂಡ್ ಪ್ರವಾಸಕ್ಕೆ ತೆರಳುವ ಮುನ್ನ ಅಲರ್ಟ್ ಪಾಲಿಸಲು ಸೂಚಿಸಲಾಗಿದೆ
08:50 PM (IST) Jul 18
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೇಂದ್ರದಲ್ಲಿರುವ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದರೆ ಮೋದಿ ಸರ್ಕಾರ ಉರುಳುತ್ತದೆ ಎಂದು ಲಾಡ್ ಹೇಳಿದ್ದಾರೆ. ಬಿಜೆಪಿ 75 ವರ್ಷ ಮೇಲ್ಪಟ್ಟವರನ್ನು ರಾಜಕೀಯದಿಂದ ನಿವೃತ್ತಿಗೊಳಿಸಬೇಕೆಂದು ಹೇಳಿದ್ದಾರೆ .
08:37 PM (IST) Jul 18
ಇಸ್ಲಾಂಪುರ ಅನ್ನೋ ಗ್ರಾಮದ ಹೆಸರನ್ನು ಇದೀಗ ಈಶ್ವರಪುರವಾಗಿ ಮುರುನಾಮಕರಣ ಮಾಡಲು ಮಹಾರಾಷ್ಟ್ರ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಇತ್ತ ವಿಧಾನಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸಲಾಗಿದೆ.
08:14 PM (IST) Jul 18
ಧರ್ಮಸ್ಥಳದಲ್ಲಿ ಸರಣಿ ಹತ್ಯೆಗಳು ನಡೆದಿದ್ದು, ಮೃತದೇಹಗಳನ್ನು ಹೂತಿಟ್ಟಿರುವುದಾಗಿ ಹೇಳಿದ ಅನಾಮಿಕ ವ್ಯಕ್ತಿ ದೂರು ದಾಖಲಿಸಿದ್ದಾನೆ. ಈತ ನೀಡಿದ ದೂರಿನಲ್ಲಿ ಏನಿದೆ? ಇದರಲ್ಲಿ ಸತ್ಯಾಂಶವಿದೆಯಾ?
08:01 PM (IST) Jul 18
ಧರ್ಮಸ್ಥಳದಲ್ಲಿ ನಡೆದಿರುವ 100ಕ್ಕೂ ಅಧಿಕ ನಿಗೂಢ ಹತ್ಯೆಗಳ ಬಗ್ಗೆ ಮಾಜಿ ನೌಕರನೊಬ್ಬ ಬಹಿರಂಗಪಡಿಸಿದ್ದಾನೆ. ನೂರಾರು ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರ ಅತ್ಯಾಚಾ*ರ ಮತ್ತು ಕೊಲೆಗಳ ಆರೋಪ ಕೇಳಿಬಂದಿದ್ದು, ಈ ಹತ್ಯೆಗಳ ತನಿಖೆಗೆ ಆಗ್ರಹಿಸಿ ವಕೀಲರ ಪತ್ರ ವೈರಲ್ ಆಗಿದೆ.
07:34 PM (IST) Jul 18
07:16 PM (IST) Jul 18
ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರು ಇ-ವಿಟಾರಾ, ಸೆಪ್ಟೆಂಬರ್ 3 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಅತ್ಯಾಧುನಿಕ ವೈಶಿಷ್ಟ್ಯಗಳು, ಡ್ಯುಯಲ್-ಸ್ಕ್ರೀನ್ ಡ್ಯಾಶ್ಬೋರ್ಡ್ ಮತ್ತು ADAS ತಂತ್ರಜ್ಞಾನದೊಂದಿಗೆ 426 ಕಿ.ಮೀ ವರೆಗಿನ ರೇಂಜ್ ಹೊಂದಿದೆ.
07:16 PM (IST) Jul 18
ಹೆಂಡತಿಯನ್ನು ಕಂಟ್ರೋಲ್ ಮಾಡುವುದು ಹೇಗೆ ಎಂದು ಭಾಗ್ಯಲಕ್ಷ್ಮಿ ಆದಿ ಪಾತ್ರಧಾರಿ ಹರೀಶ್ ರಾಜ್ ಹೇಳಿದ್ದಾರೆ ನೋಡಿ.
06:46 PM (IST) Jul 18
06:43 PM (IST) Jul 18
ಭಾರತದಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು ನಡೆದಿರುವ ಮಹತ್ವದ ಮಾಹಿತಿಯನ್ನು ಗುಪ್ತಚರ ಇಲಾಖೆ ಬಯಲು ಮಾಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಪತ್ತೆಯಾಗಿದ್ದಾನೆ.
06:32 PM (IST) Jul 18
06:21 PM (IST) Jul 18
06:20 PM (IST) Jul 18
ಚಿಕ್ಕಮಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಕಾಂತರಾಜ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವಿಫಲತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತಲೆಗೆ ಬಾಟಲಿ ಹೊಡೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
05:35 PM (IST) Jul 18
ಇನ್ಸ್ಟಾಗ್ರಾಂ ರೀಲ್ಸ್ ನೋಡುವಾಗ ಕೈಬೆರಳು ಪದೇ ಪದೇ ಸ್ವೈಪ್ ಮಾಡುತ್ತಲೇ ಇರಬೇಕು. ಮುಂದಿನ ರೀಲ್ಸ್ ನೋಡಲು ಸ್ವೈಪ್ ಮಾಡಲೇಬೇಕು. ಆದರೆ ಇನ್ಸ್ಟಾಗ್ರಾಂ ಇದೀಗ ಹೊಸ ಫೀಚರ್ಸ್ ಜಾರಿಗೆ ತರಲು ಮುಂದಾಗಿದೆ. ನೀವು ಮೊಬೈಲ್ ಬೆಡ್ ಮೇಲಿಟ್ಟು ಅರಾಮಾಗಿ ಮಲಗಿಕೊಂಡೆ ಎಲ್ಲಾ ರೀಲ್ಸ್ ನೋಡಬಹುದು.
05:32 PM (IST) Jul 18
05:15 PM (IST) Jul 18
05:00 PM (IST) Jul 18
ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೀಟ್ಗಳಿಗೆ ತರಬೇತಿಗಾಗಿ ಶುಲ್ಕ ವಿಧಿಸುವ ಸರ್ಕಾರದ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ. ಕ್ರೀಡಾಪಟುಗಳು ಮತ್ತು ತರಬೇತುದಾರರು ಈ ನಿರ್ಧಾರವನ್ನು ವಿರೋಧಿಸಿದ್ದಾರೆ, ಇದು ಬಡ ಕ್ರೀಡಾಪಟುಗಳಿಗೆ ಹೊರೆಯಾಗುತ್ತದೆ ಎಂದು ವಾದಿಸಿದ್ದಾರೆ.
04:55 PM (IST) Jul 18
ಬಾಹ್ಯಾಕಾಶದಿಂದ ಭೂಮಿಗೆ ಜಿಗಿದು ಐತಿಹಾಸಿಕ ಸಾಧನೆ ಮಾಡಿದ್ದ ಫೆಲಿಕ್ಸ್ ಬೌಮ್ಗಾರ್ಟ್ನರ್ ಇದೀಗ ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 56ರ ಹರೆಯದ ಸ್ಕೈಡೈವರ್ ಸಾವಿನ ಸುದ್ದಿ ಸಾಹಸಿಗಳನ್ನು ಬೆಚ್ಚಿಬೀಳಿಸಿದೆ.
04:10 PM (IST) Jul 18
04:06 PM (IST) Jul 18
ಲಿಕ್ಕರ್ ಹಗರಣದಲ್ಲಿ ಇದೀಗ ಇಡಿ ಅಧಿಕಾರಿಗಳು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಪುತ್ರನ ಬಂಧಿಸಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದ ದಿನವೇ ಅರೆಸ್ಟ್ ಮಾಡಲಾಗಿದ್ದು, ಇದೀಗ ತೀವ್ರ ಕೋಲಾಹಲ ಸೃಷ್ಟಿಯಾಗಿದೆ.
03:37 PM (IST) Jul 18
02:47 PM (IST) Jul 18
01:52 PM (IST) Jul 18
'ಬ್ಯಾಂಗಲ್ ಬಂಗಾರಿ' ಹಾಡಿನಿಂದಲೇ ಸದ್ದು ಮಾಡುತ್ತಿರುವ ಯುವ ರಾಜ್ಕುಮಾರ್ ನಟನೆಯ 'ಎಕ್ಕ' ಸಿನಿಮಾದ ಕುರಿತು ಚಿತ್ರಕಥೆಗಾರ ವಿಕ್ರಮ್ ಹತ್ವಾರ್ ಸಂದರ್ಶನ.
01:32 PM (IST) Jul 18
ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 2026ರ ವೇಳೆಗೆ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಗಡುವು ನೀಡಿದ್ದಾರೆ. ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಕೆ ವರ್ಷಾಂತ್ಯದೊಳಗೆ ಮುಗಿಯಬೇಕು ಹಾಗೂ ಭೂಸ್ವಾಧೀನ ಸಮಸ್ಯೆ ಬಗೆಹರಿದಿದೆ.
01:31 PM (IST) Jul 18
ಯಾರೋ ಹೇಳಿದರು ಎಂದ ಮಾತ್ರಕ್ಕೆ ದಿಢೀರನೆ ಎಸ್ಐಟಿ ಮಾಡಲು ಆಗುವುದಿಲ್ಲ. ಎತ್ತು ಮರಿ ಹಾಕಿತ್ತು ಅಂಥ ಕೊಟ್ಟಿಗೆ ರೆಡಿ ಮಾಡಲು ಸಾಧ್ಯನಾ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
01:00 PM (IST) Jul 18
ಮಾಜಿ ಸಚಿವ ಪಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಮದುವೆ ಆಮಿಷವೊಡ್ಡಿ ವಂಚಿಸಿದ ಆರೋಪ ಕೇಳಿಬಂದಿದೆ. ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ.
12:50 PM (IST) Jul 18
ರುಚಿತ್ ಬಿ ಆಹಾರ ಉತ್ಪನ್ನಗಳು ಒಂದು ಬ್ರ್ಯಾಂಡ್ ಆಗಿ ಬೆಳೆಯತೊಡಗಿದೆ. ಕರ್ನಾಟಕದ ಮೂಲೆ ಮೂಲೆಗಳಿಗೂ ತಲುಪುತ್ತಿರುವ ರುಚಿತ್ ಬಿ ಉತ್ಪನ್ನಗಳು ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲೂ ಬೇಡಿಕೆ ಗಿಟ್ಟಿಸಿಕೊಂಡಿವೆ.
12:30 PM (IST) Jul 18
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಟನೆಯ ಮೊದಲ ಸಿನಿಮಾ ಇಂದು ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಕಿರೀಟಿ ತಮ್ಮ ಕನಸಿನ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ್ದಾರೆ.
12:13 PM (IST) Jul 18
ಜನರೊಂದಿಗಿನ ಈ ಭಾಂಧವ್ಯವನ್ನು ಮತ್ತಷ್ಟು ಪುಷ್ಟಿಗೊಳಿಸಲು 'Z What's Next' ಅನ್ನುವ ಮೂಲಕ ನೆಟ್ವರ್ಕ್ ಟ್ರಾನ್ಸ್ಫರ್ಮೇಷನ್ನ ಕಂಟೆಂಟ್ ತಂತ್ರಜ್ಞಾನದ ಪವರ್ ಹೌಸ್ ಮೂಲಕ ಮಾಡಲು ಹೊರಟಿದೆ.
11:47 AM (IST) Jul 18
ಯಾವುದೇ ಸಿನಿಮಾದಲ್ಲಿ ನಟಿಸಲು ಒಪ್ಪದೇ ಇದ್ದ ಅನಂತ್ ನಾಗ್ ಅವರು ಇದೀಗ ನೆಟ್ಫ್ಲಿಕ್ಸ್ನಲ್ಲಿ ಬಹುಭಾಷೆಯಲ್ಲಿ ಪ್ರಸಾರವಾಗಲಿರುವ ‘ಸ್ಟೆಪ್ಸನ್ಸ್’ ವೆಬ್ಸೀರೀಸ್ನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ.
11:30 AM (IST) Jul 18
11:28 AM (IST) Jul 18
ಸೋಲೆ ಗೆಲುವಿನ ಮೆಟ್ಟಿಲು ಅನ್ನೋ ಮಾತು ಇಂಥವರನ್ನು ನೋಡಿಯೇ ಹುಟ್ಟಿರಬೇಕು. ಬಣ್ಣ ಬಣ್ಣದ ಕ್ಯಾಪ್ಸಿಕಂ ಬೆಳೆದು ಯಾರೂ ಕೊಳ್ಳೋರಿಲ್ಲದೆ ನಷ್ಟದಲ್ಲಿದ್ದಾಗ ಹುಟ್ಟಿದ ಬ್ಯಾಂಡ್ 'ಮಜಾ' ಉಪ್ಪಿನಕಾಯಿ.
11:13 AM (IST) Jul 18
ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.
11:11 AM (IST) Jul 18
10:48 AM (IST) Jul 18
ಕನ್ನಡ ಅನುವಾದದಲ್ಲಿ ಆಗುತ್ತಿರುವ ಲೋಪ ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿ ನನ್ನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
10:37 AM (IST) Jul 18
ತಮ್ಮ ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗದವರು ನೆನಪಾಗುತ್ತಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.