ಬೆಂಗಳೂರು(ಅ. 10) ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ಕಾಗೇರಿ ಅವರನ್ನು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ.
ನಿಮ್ಗೆ ಸ್ಪೀಕರ್ ಆಗ್ತೀನಿ ಅಂತಾ ಗೊತ್ತಿತ್ತಾ..? ನಿಮ್ಗೆ ಸ್ಪೀಕರ್ ಆಗ್ತೀನಿ ಅಂತಾ ಗೊತ್ತಾಗಿದ್ದು ನೀವು ಅಧಿಕಾರ ಸ್ವೀಕಾರ ಮಾಡುವ ದಿನವೇ.. ಪಾಪ ನೀವು ಮಿನಿಸ್ಟರ್ ಆಗ್ಬೇಕು ಅಂತಾ ಅಂದ್ಕೊಂಡಿದ್ದೀರಿ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಾಲೆಳೆದಿದ್ದಾರೆ.
ಯತ್ನಾಳ್ ಬ್ಯಾಟ್, ಸಿದ್ದು ಬೌಂಡ್ರಿ: ಕಲಾಪದಲ್ಲಿ ಇಂದು ಕಂಡಿದ್ದು ನೋಡ್ರಿ!
ಪಾಪ ಅಶೋಕ್ ಮಾಜಿ ಡಿಸಿಎಂ, ಹಾಲಿ ಕಂದಾಯ ಸಚಿವ.. ಸಿ.ಟಿ.ರವಿ ಟೂರಿಸ್ಟ್ ಮಿನಿಸ್ಟರ್.. ಟೂರಿಸ್ಟ್ ಮಿನಿಸ್ಟರಾ ರವಿ..? ಎನ್ನುತ್ತಾ ಆಡಳಿತ ಪಕ್ಷದವರನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದರು.
ಯಡಿಯೂರಪ್ಪ ಅವರಿಗೆ ಯಾರು ಡಿಸಿಎಂ ಅನ್ನೋದೇ ಗೊತ್ತಿಲ್ಲ ಪಾಪ.. ಒಬ್ಬರು ಸೋತವರು ಡಿಸಿಎಂ, ಒಬ್ಬರು ಮೊದಲ ಬಾರಿಗೆ ಸಚಿವರಾದವರು ಡಿಸಿಎಂ, ಕಾರಜೋಳ ಡಿಸಿಎಂ ನಾನು ಒಪ್ತೀನಿ.. ಯಡಿಯೂರಪ್ಪ ಹೇಳಿದವರು ಒಂದಿಬ್ಬರು ಸಚಿವರಾಗಿದ್ದಾರೆ ಅಷ್ಟೇ.. ಉಳಿದವರು ಹೈಕಮಾಂಡ್ ಹೇಳಿದವರು ಸಚಿವರು ಎನ್ನುತ್ತ ಯಡಿಯೂರಪ್ಪ ವೀಕ್ ಸಿಎಂ ಎಂಬ ತಮ್ಮ ಮೊದಲಿನ ಹೇಳಿಕೆಯನ್ನು ಬೇರೆ ತೆರನಾಗಿ ವಿಧಾನಸೌಧದಲ್ಲಿಯೂ ಹೊರಗಿಟ್ಟರು.
ಚಳಿಗಾಲದ ಅಧಿವೇಶನ ಆರಂಭಕ್ಕೆ ಕೊನೆ ದಿನ ಕಾಂಗ್ರೆಸ್ ವಿಪಕ್ಷ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿತ್ತು. ವಿಪಕ್ಷ ನಾಯಕರ ರೇಸ್ ನಲ್ಲಿ ಇದ್ದ ಪರಮೇಶ್ವರ ಮತ್ತು ಎಚ್ಕೆ ಪಾಟೀಲರನ್ನು ಹಿಂದಿಕ್ಕಿ ಸಿದ್ದರಾಮಯ್ಯ ಆಯ್ಕೆಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.