
ತಿರುವನೆಲ್ಲಿ[ಜ.09] ಗ್ರಾಮೀಣ ಭಾಗದ ಬಡಜನರು ತಮ್ಮ ಮಕ್ಕಳನ್ನು ನಗರದ ಅತ್ಯಾಧುನಿಕ ಶಾಲೆಗೆ ಸೇರಿಸುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಆದರೆ ಇಲ್ಲೊಬ್ಬರು ಜಿಲ್ಲಾಧಿಕಾರಿ ತಮ್ಮ ಮಗುವನ್ನು ಅಂಗನವಾಡಿಗೆ ಸೇರಿಸಿ ಸರಳತೆ ಮೆರೆದಿದ್ದಾರೆ.
ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ ಸೇರಿಸಿದ್ದೇನೆ ಎಂದು ಶಿಲ್ಪಾ ಹೇಳುತ್ತಾರೆ.
ಎಲ್ಲರೊಳಗೊಬ್ಬನಾಗಿ ಎಲ್ಲರಂತಾಗು: ಅಂಗನವಾಡಿಗೆ ಜಿಲ್ಲಾಧಿಕಾರಿ ಮಗು!
ಅಂಗನವಾಡಿ ಕೇಂದ್ರಗಳು ಬದಲಾಗಿವೆ. ಮಕ್ಕಳಿಗೆ ಸಕಲ ಪೌಷ್ಟಿಕ ಆಹಾರ ನೀಡುತ್ತಿವೆ. ಮಕ್ಕಳ ಸವರ್ತೋಮುಖ ಬೆಳವಣಿಗೆಗೆ ಕಾರಣವಾಗುತ್ತಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.