ದಸರಾ ವೇಳೆಗೆ ಪೊಲೀಸರ ಸಂಬಳ ಏರಿಕೆ: ಬೊಮ್ಮಾಯಿ

Published : Sep 10, 2019, 09:37 AM IST
ದಸರಾ ವೇಳೆಗೆ ಪೊಲೀಸರ ಸಂಬಳ ಏರಿಕೆ: ಬೊಮ್ಮಾಯಿ

ಸಾರಾಂಶ

ಪೊಲೀಸರಿಗೆ ದಸರಾ ವೇಳೆಗೆ ಔರಾದ್ಕರ್‌ ಸಮಿತಿ ವರದಿ ಅನುಷ್ಠಾನಗೊಳಿಸಿರುವ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು [ಸೆ.10]:  ರಾಜ್ಯ ಪೊಲೀಸರಿಗೆ ನಾಡಹಬ್ಬ ದಸರಾ ವೇಳೆಗೆ ಔರಾದ್ಕರ್‌ ಸಮಿತಿ ವರದಿ ಅನುಷ್ಠಾನಗೊಳಿಸಿರುವ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬದ ವೇಳೆಗೆ ಔರಾದ್ಕರ್‌ ಸಮಿತಿ ವರದಿ ಅನುಷ್ಠಾನ ಮಾಡಲು ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ನಾಡ ಹಬ್ಬದ ವೇಳೆಗೆ ಪೊಲೀಸರಿಗೆ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಔರಾದ್ಕರ್‌ ಸಮಿತಿ ವರದಿ ಅನುಷ್ಠಾನದಿಂದಾಗಿ ಪೇದೆಯಿಂದ ಹಿಡಿದು ಡಿವೈಎಸ್‌ಪಿವರೆಗೆ ಔರಾದ್ಕರ್‌ ವರದಿಯಂತೆ ವೇತನ ಪರಿಷ್ಕರಣೆ ಆಗಲಿದೆ. ಜತೆಗೆ ಕಾರಾಗೃಹ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಯ ವೇತನ ಪರಿಷ್ಕರಿಸುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಅವರಿಗೂ ಔರಾದ್ಕರ್‌ ವರದಿಯಂತೆ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ