
ಬೆಂಗಳೂರು [ಜು.08] : ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪ್ರಹಸನ ಜೋರಾಗಿದ್ದು, ಮೈತ್ರಿ ಸರ್ಕಾರದ ಎಲ್ಲಾ ಸಚಿವರೂ ರಾಜೀನಾಮೆ ನೀಡಿದ್ದಾರೆ. ಇದೇ ಬೆನ್ನಲ್ಲೇ ಅನುಮಾನವಿರುವ ಬಿಜೆಪಿ ಶಾಸಕರ ಮೇಲೆ ಮುಖಂಡರು ಹದ್ದಿನ ಕಣ್ಣು ಇರಿಸಿದ್ದಾರೆ.
ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದು, ಕೆಲ ಶಾಸಕರಿಗೆ ಬೆಂಗಳೂರಿಗೆ ಆಗಮಸುವಂತೆ ಬುಲಾವ್ ನೀಡಲಾಗಿದೆ.
ಲಗೇಜ್ ಸಮೇತವಾಗಿ ಬೆಂಗಳೂರಿಗೆ ಬರುವಂತೆ ತುಮಕೂರು ಜಿಲ್ಲೆಯ ನಾಲ್ವರು ಬಿಜೆಪಿ ಶಾಸಕರಿಗೆ ಸೂಚನೆ ನೀಡಲಾಗಿದೆ.
ತುಮಕೂರು ಶಾಸಕರಾದ ಜ್ಯೋತಿಗಣೇಶ್, ಚಿಕ್ಕನಾಯಕನಹಳ್ಳಿ ಶಾಸಕ ಮಾಧುಸ್ವಾಮಿ ಬೆಂಗಳೂರಿಗೆ ಪಯಣ ಬೆಳೆಸಿದ್ದು, ತಿಪಟೂರು ಶಾಸಕ ಬಿ.ಸಿ.ನಾಗೇಶ್ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇನ್ನು ಇನ್ನೋರ್ವ ತುರುವೆಕೆರೆ ಶಾಸಕ ಮಸಾಲೆ ಜಯರಾಮ್ ಮೇಲೆಯೂ ಕೂಡ ಬಿಜೆಪಿ ನಾಯಕರು ಕಣ್ಣಿಟ್ಟು ಬೆಂಗಳೂರಿಗೆ ಆಗಮಿಸಲು ಬುಲಾವ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.