ಮೈತ್ರಿಕೂಟದಲ್ಲಿ ಕಟ್ಟೆಚ್ಚರ : ಪರಾರಿ ವೀರರ ಮೇಲೆ ನಿಗಾ

Published : Jul 19, 2019, 09:31 AM IST
ಮೈತ್ರಿಕೂಟದಲ್ಲಿ ಕಟ್ಟೆಚ್ಚರ : ಪರಾರಿ ವೀರರ ಮೇಲೆ ನಿಗಾ

ಸಾರಾಂಶ

ಕಾಂಗ್ರೆಸ್ ಜೆಡಿಎಸ್ ನಲ್ಲಿ ಅನುಮಾನವಿರುವ ಶಾಸಕರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೆಲ ಶಾಸಕರ ಎಸ್ಕೇಪ್ ಹಿನ್ನೆಲೆ ಕಣ್ಣು ಇರಿಸಲಾಗಿದೆ. 

ಬೆಂಗಳೂರು [ಜು.19] :  ವಿಶ್ವಾಸಮತ ಸಾಬೀತುಪಡಿಸಿ ಸರ್ಕಾರ ಉಳಿಸಿಕೊಳ್ಳುವ ಹರಸಾಹಸ ಪಡುತ್ತಿರುವ ಮೈತ್ರಿ ಸರ್ಕಾರದ ಪಕ್ಷಗಳ ನಾಯಕರು ಗುರುವಾರ ತಮ್ಮ ಶಾಸಕರು ಕೈತಪ್ಪಿ ಹೋಗದಂತೆ ಸಾಕಷ್ಟು ನಿಗಾ ವಹಿಸಿದ್ದರು.

ತಮ್ಮ ಜೊತೆಯಲ್ಲೇ ಇದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌ ಬುಧವಾರದ ರಾತ್ರಿ ಇದ್ದಕ್ಕಿದ್ದಂತೆ ಕೈ ತಪ್ಪಿಹೋದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಕಾಂಗ್ರೆಸ್‌ ನಾಯಕರು ಇನ್ಯಾವುದೇ ಶಾಸಕರು ಕೈ ತಪ್ಪಿಹೋಗದಂತೆ ನೋಡಿಕೊಳ್ಳಲು ಅನುಮಾನವಿರುವ ಶಾಸಕರ ಚಲನವಲನಗಳ ಮೇಲೆ ನಿಗಾ ಇಡಲು ಗೌಪ್ಯವಾಗಿ ಕೆಲವರನ್ನು ನಿಯೋಜಿಸಿದ್ದರು. ಯಾವುದೇ ಶಾಸಕರು ಸದನದಿಂದ ಎದ್ದು ಮೊಗಸಾಲೆ, ತಿಂಡಿ, ಕಾಫಿ ಊಟಕ್ಕೆ ಹೋದರೂ ಅವರು ವಾಪಸ್‌ ಸದನಕ್ಕೆ ಬರುವವರೆಗೆ ಅವರಿಗೆ ಗೊತ್ತಿಲ್ಲದಂತೆ ವೀಕ್ಷಕರು ಅವರ ಹಿಂದೆಯೇ ಸಾಗುತ್ತಿದ್ದರು.

ಒಂದು ವೇಳೆ, ಒಂದು ವೇಳೆ ಯಾವುದೇ ಶಾಸಕರ ನಡೆಯಲ್ಲಿ ಅನುಮಾನಗಳು ವ್ಯಕ್ತವಾದರೆ ತಕ್ಷಣ ಮಾಹಿತಿ ನೀಡುವಂತಯೂ ನಾಯಕರು ಸೂಚಿಸಿದ್ದರು. ಅದರಂತೆ ವೀಕ್ಷಕರು ನಿಗಾ ವಹಿಸಿದ್ದು ಕಂಡುಬಂತು.

ಮೇಲ್ಮನೆ ಸದಸ್ಯರ ಆಗಮನ:

ಭಾರೀ ಕುತೂಹಲ ಕೆರಳಿದ್ದ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಗುರುವಾರದ ಕಲಾಪ ವೀಕ್ಷಣೆಗೆ ರಾಜ್ಯಸಭಾ ಸದಸ್ಯರಾದ ಬಿ.ಕೆ.ಹರಿಪ್ರಸಾದ್‌, ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ, ವಿಧಾನ ಪರಿಷತ್‌ ಸದಸ್ಯರಾದ ಭೋಸರಾಜ್‌, ಬಿಜೆಪಿಯ ನಾರಾಯಣಸ್ವಾಮಿ, ಜೆಡಿಎಸ್‌ನ ರಮೇಶ್‌ಗೌಡ, ಬೋಜೇಗೌಡ ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಾಡಾದಿಂದ ಕೊಲ್ಹಾಪುರಿ ಚಪ್ಪಲಿ ಸೇಲ್‌, ಬೆಲೆ ₹83000!
ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌