ಕ್ಷಮಿಸಿಬಿಡಿ: ಫೇಸ್‌ಬುಕ್‌ನಲ್ಲಿ ಮತದಾರರಿಗೆ ಪತ್ರ ಬರೆದ ಅತೃಪ್ತ ಶಾಸಕ!

Published : Jul 16, 2019, 08:02 AM ISTUpdated : Jul 16, 2019, 08:05 AM IST
ಕ್ಷಮಿಸಿಬಿಡಿ: ಫೇಸ್‌ಬುಕ್‌ನಲ್ಲಿ ಮತದಾರರಿಗೆ ಪತ್ರ ಬರೆದ ಅತೃಪ್ತ ಶಾಸಕ!

ಸಾರಾಂಶ

ಕ್ಷಮಿಸಿಬಿಡಿ: ಫೇಸ್‌ಬುಕ್‌ನಲ್ಲಿ ಮತದಾರರಿಗೆ ರೆಬೆಲ್ ಕೈ ಶಾಸಕನ ಪತ್ರ| ಹಣ, ಆಮಿಷಕ್ಕೆ ನೈತಿಕತೆ ಮಾರಿಕೊಂಡಿಲ್ಲ

ಯಲ್ಲಾಪುರ[ಜು.16]: ರಾಜೀನಾಮೆ ನೀಡಿರುವ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶಿವರಾಮ ಹೆಬ್ಬಾರ್‌ ಅವರು ಫೇ​ಸ್‌ಬುಕ್‌ನಲ್ಲಿ ಕ್ಷೇತ್ರದ ಮತದಾರರಿಗೆ ಬಹಿರಂಗ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. ಆದರೆ, ಈ ಪತ್ರಕ್ಕೆ ಫೇಸ್‌ಬುಕ್‌ನಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಬೆಂಬಲಿಸಿದ್ದಾರೆ.

ಪತ್ರದಲ್ಲೇನಿದೆ?:

‘ನನ್ನ ಅನಿವಾರ್ಯತೆ ಬಗ್ಗೆ ನಿಮ್ಮಲ್ಲಿ ಹಂಚಿಕೊಳ್ಳಲು ಬಯಸುತ್ತೇನೆ. ಅಭಿವೃದ್ಧಿಯನ್ನೇ ಮಾನದಂಡವಾಗಿರಿಸಿಕೊಂಡು 2ನೇ ಬಾರಿಗೆ ಶಾಸಕನಾಗಿ ಆಯ್ಕೆಯಾದ ನಾನು, ಈ ಮೈತ್ರಿ ಸರ್ಕಾರದಲ್ಲಿ ತೀವ್ರ ಪ್ರಯತ್ನದ ಹೊರತಾಗಿಯೂ, ನನ್ನ ಕ್ಷೇತ್ರಕ್ಕೆ ಯಾವ ಹೊಸ ಯೋಜನೆಗಳನ್ನೂ ತರುವಲ್ಲಿ ಯಶಸ್ಸು ಕಾಣಲಿಲ್ಲ. ಸರ್ಕಾರದ ತಾರತಮ್ಯ ನೀತಿ ಅನುಸರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರದ ಸಮಸ್ಯೆ ಕೇಳುವ ಕನಿಷ್ಠ ಕಾಳಜಿ ತೋರಲಿಲ್ಲ. ಯಾವುದೇ ಹಣ, ಆಸೆ ಆಮಿಷಗಳಿಗೆ ನನ್ನ ನೈತಿಕತೆ ಮಾರಿಕೊಂಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೈತ್ರಿ ಸರ್ಕಾರದಲ್ಲಿ ದಿನಂಪ್ರತಿ ಎರಡೂ ಪಕ್ಷಗಳ ನಾಯಕರಲ್ಲಿ ಕಚ್ಚಾಟ ನಡೆಯುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಹೀಗಾಗಿ ಕ್ಷೇತ್ರದ ಹಿತಾಸಕ್ತಿಗಾಗಿ ರಾಜೀನಾಮೆ ಕೊಟ್ಟು, ಮತ್ತೆ ಜನರ ಬಳಿ ಹೋಗುವ ಗಟ್ಟಿಯಾದ ನಿರ್ಧಾರ ಮಾಡಿದ್ದೇನೆ. ಆದರೆ, ಇನ್ನೂ ಪಕ್ಷದಲ್ಲಿಯೇ ಇದ್ದೇನೆ. ನಾನು ಎಲ್ಲೇ ಇರಲಿ, ಎಲ್ಲ ವರ್ಗದ ಜನರು ಹಾಗೂ ನನ್ನ ಕಾರ್ಯಕರ್ತರನ್ನು ವಿಶ್ವಾಸದಿಂದ ನಡೆಸಿಕೊಂಡು ಹೋಗುತ್ತೇನೆ’ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ