ಇದು ನಮ್ಮ ಕೊನೆಯ ಸಭೆ ಎಂದ ಕೈ ಸಚಿವ

Published : Jul 07, 2019, 09:08 AM IST
ಇದು ನಮ್ಮ ಕೊನೆಯ ಸಭೆ ಎಂದ ಕೈ ಸಚಿವ

ಸಾರಾಂಶ

ಕರ್ನಾಟಕ ಸರ್ಕಾರದ ಸಚಿವರೋರ್ವರು ಸರ್ಕಾರ ಮುಂದುವರಿಯುವ ಸಂಬಂಧ ಅನುಮಾನ ವ್ಯಕ್ತಪಡಿಸಿದ್ದು, ಸಭೆಯೊಂದರಲ್ಲಿ ಪಾಲ್ಗೊಂಡ ವೇಳೆ ಇದೇ ಕೊನೆಯ ಸಭೆಯಾಗಬಹುದು ಎಂದಿದ್ದಾರೆ.

ಚಿಕ್ಕಬಳ್ಳಾಪುರ[ಜು.07] :‘ಬಹುಶಃ ಇದೇ ನನ್ನ ಕೊನೆಯ ಸಭೆಯಾಗಬಹುದು!  -ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ನಡೆದ ಶಾಸಕರ ರಾಜೀನಾಮೆ ಪ್ರಕರಣವನ್ನು ಮೊಬೈಲ್‌ ನೋಡಿ ಖಚಿತಪಡಿಸಿಕೊಂಡ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಅವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಚ್‌.ವಿ. ಮಂಜುನಾಥ್‌ ಬಳಿ ಹೇಳಿದ ಮಾತುಗಳಿವು. 

ಗೌರಿಬಿದನೂರು ತಾಲೂಕಿನ ಡಿ. ಪಾಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ಕರೆಯಲಾಗಿತ್ತು. ಸಭೆ ಆರಂಭಕ್ಕೂ ಮುನ್ನವೇ ಮೈತ್ರಿ ಸರ್ಕಾರದ 14 ಮಂದಿ ಶಾಸಕರು ರಾಜಿನಾಮೆ ನೀಡುವ ಕುರಿತು ಹಬ್ಬಿರುವ ಸುದ್ದಿ ಕುರಿತು ಸುದ್ದಿಗಾರರ ಪ್ರಶ್ನಿಸಿದರೆ ಸರ್ಕಾರದ ಉಭಯ ಪಕ್ಷಗಳ ಯಾವುದೇ ಶಾಸಕರು, ರಾಜಿನಾಮೆ ನೀಡುವ ಪ್ರಶ್ನಯೇ ಇಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. 

ಆದರೆ ಸಭೆ ಆರಂಭವಾದ ಕೆಲ ಹೊತ್ತಿನಲ್ಲಿಯೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ವಿಧಾನಸಭಾಧ್ಯಕ್ಷರ ಕಚೇರಿಗೆ ಆಗಮಿಸಿರುವ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಮೊಬೈಲ್‌ನಲ್ಲಿಯೇ ವೀಕ್ಷಿಸಿದ ಸಚಿವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರೊಂದಿಗೆ ಬಹುಶ ಇದೇ ಕೊನೆಯ ಸಭೆಯಾಗಬಹುದು ಎಂದು ನಗುತ್ತಲೇ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಮೇಶ್ವರ್ ಸಿಎಂ ಆಗಲಿ: 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ
ನೌಕರರಿಗೆ ಸಂಬಳ, ಪಿಂಚಣಿ ನೀಡಲು ಕೇರಳದಲ್ಲಿ ತತ್ವಾರ