ಕಾಂಗ್ರೆಸ್‌ನ ಬಹುತೇಕ ಶಾಸಕರು ಸ್ವಕ್ಷೇತ್ರಕ್ಕೆ, ಹೋಟೆಲಲ್ಲೀಗ 18 ಮಂದಿ!

Published : Jul 21, 2019, 08:04 AM IST
ಕಾಂಗ್ರೆಸ್‌ನ ಬಹುತೇಕ ಶಾಸಕರು ಸ್ವಕ್ಷೇತ್ರಕ್ಕೆ, ಹೋಟೆಲಲ್ಲೀಗ 18 ಮಂದಿ!

ಸಾರಾಂಶ

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಯತ್ನ| ಕಾಂಗ್ರೆಸ್ಸಿನ ಬಹುತೇಕ ಶಾಸಕರು ಸ್ವಕ್ಷೇತ್ರಕ್ಕೆ| ಹೋಟೆಲಲ್ಲೀಗ 18 ಮಂದಿ

 

ಬೆಂಗಳೂರು[ಜು.21]: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ತನ್ನ ಶಾಸಕರನ್ನು ಭದ್ರಪಡಿಸಿಕೊಳ್ಳಲು ಬೆಂಗಳೂರಿನ ತಾಜ್‌ ವಿವಾಂತ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪಕ್ಷ ವಸತಿ ವ್ಯವಸ್ಥೆ ಮಾಡಿದ್ದರೂ, ಬಹುತೇಕ ಶಾಸಕರು ಕ್ಷೇತ್ರಗಳತ್ತ ತೆರಳಿದ್ದಾರೆ. ಶನಿವಾರದ ವೇಳೆಗೆ ಕೇವಲ 17-18 ಮಂದಿ ಶಾಸಕರು ಮಾತ್ರ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ನ 78 ಶಾಸಕರ ಪೈಕಿ 13 ಮಂದಿ ಶಾಸಕರು ರಾಜೀನಾಮೆ ನೀಡಿ ಮುಂಬೈನ ಅತೃಪ್ತರ ಕೂಟದಲ್ಲಿ ಸೇರಿಕೊಂಡಿದ್ದಾರೆ. ಉಳಿದಂತೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದ 63 ಮಂದಿ ಪೈಕಿ ಕೇವಲ 17-18 ಮಂದಿ ಶಾಸಕರು ಮಾತ್ರ ಹೋಟೆಲ್‌ನಲ್ಲಿ ಇದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇವರ ಮೇಲೆ ಮಾತ್ರ ಕಣ್ಗಾವಲು ವಹಿಸುತ್ತಿದ್ದು, ಶನಿವಾರ ಸಂಜೆ ಇಷ್ಟೇ ಮಂದಿ ಶಾಸಕರೊಂದಿಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಭಾನುವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ವೇಳೆಗೆ ಎಲ್ಲಾ ಶಾಸಕರು ಆಗಮಿಸುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Chikkamagaluru: ಹಣ ನೀಡಲಿಲ್ಲವೆಂದು ಪೋಷಕರೊಂದಿಗೆ ಜಗಳ: ಆಕ್ರೋಶದಿಂದ ಮನೆ ಬಿಟ್ಟ ಯುವಕ ಶವವಾಗಿ ಪತ್ತೆ
ಉಚಿತ ಪಾಸ್‌ ವಿತರಣೆ ವೇಳೆ ಅವಘಡ: ಸಚಿವೆ ಮೇಲೆ ಬಿಸಿಬಿಸಿ ಪಾಯಸ ಚೆಲ್ಲಿದ ಕಾರ್ಯಕರ್ತರು