ಪಕ್ಷದಲ್ಲೇ ಉಳಿಯುತ್ತೇನೆ ಎಂದ ಕೈ ನಾಯಕ : ರಾಜೀನಾಮೆ ವಾಪಸ್?

Published : Jul 17, 2019, 03:06 PM IST
ಪಕ್ಷದಲ್ಲೇ ಉಳಿಯುತ್ತೇನೆ ಎಂದ ಕೈ ನಾಯಕ : ರಾಜೀನಾಮೆ ವಾಪಸ್?

ಸಾರಾಂಶ

ರಾಜೀನಾಮೆ ನೀಡಿ ಅತೃಪ್ತರಾಗಿ ತೆರಳಿರುವ ಈ ಕೈ ನಾಯಕ ಮತ್ತೆ ಮರಳುವ ಸಾಧ್ಯತೆ ಇದೆ. ಈ ಬಗ್ಗೆ ಸುಳಿವನ್ನು ನೀಡಿದ್ದಾರೆ.

ಬೆಂಗಳೂರು [ಜು.17] : ರಾಜ್ಯ ರಾಜಕೀಯದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟವಾಗಿದೆ. ಮುಂದಿನ ನಿರ್ಧಾರವನ್ನು ಸ್ಪೀಕರ್ ಹಾಗೂ ಕಾನೂನು ತಜ್ಞರು ತೆಗೆದುಕೊಳ್ಳುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಬಿಡುವುದಿಲ್ಲ. ಸದನದಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ ರಾಜೀನಾಮೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೇ ನೀಡಸಲು ಸಾಧ್ಯವಿಲ್ಲ ಎಂದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅವಿಶ್ವಾಸ ಮತ ಯಾಚನೆ ವೇಳೆ ಯಾವ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವುದನ್ನು ಕಾದು ನೋಡಿ. ಮೈತ್ರಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದರು. 
  
ಇನ್ನು ಕಾಂಗ್ರೆಸಿನಲ್ಲೇ  ಉಳಿಯುವ ಬಗ್ಗೆಯೂ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರ ನಡೆ ಕುತೂಹಲ ಕೆರಳಿಸಿದ್ದು, ರಾಜೀನಾಮೆ ವಾಪಸ್ ಪಡೆಯುತ್ತಾರಾ ಎನ್ನುವ ಕುತೂಹಲ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್