
ಬೆಂಗಳೂರು[ಜು.11]: ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳಾಗುತ್ತಿವೆ. ರಾಜೀನಾಮೆ ನೀಡಿದ ಅತೃಪ್ತ ಶಾಸಕರನ್ನು ಓಲೈಸಲು ದೋಸ್ತಿ ನಾಯಕರು ಎಲ್ಲಾ ರೀರತಿಯ ಪ್ರಯತ್ನ ನಡೆಸಿದ್ದರು. ಹೀಗಿದ್ದರೂ ಮುಂಬೈ ಸೇರಿದ್ದ ಶಾಸಕರು ಹಠ ಮುಂದುವರೆಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಕೊನೆಯ ಅಸ್ತ್ರವೆಂಬಂತೆ ಕಾಂಗ್ರೆಸ್ ಅನರ್ಹತೆಯ ಅಸ್ತ್ರ ಪ್ರಯೋಗಿಸಿತ್ತು. ಇದೀಗ ಈ ಅಸ್ತ್ರದಿಂದ ಇಬ್ಬರು ಕೈ ನಾಯಕರ ರಾಜಕೀಯ ಭವಿಷ್ಯ ಕೊನೆಯಾಗುವ ಸಾಧ್ಯತೆಗಳು ಗರಿಗೆದರಿವೆ.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೌದು ಕಳೆದೆರಡು ದಿನಗಳ ಹಿಂದೆ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ನಾಯಕರಿಗೆ ಮರಳಿ ಬನ್ನಿ, ಇಲ್ಲವಾದಲ್ಲಿ ಅನರ್ಹತೆಯ ಅಸ್ತ್ರ ಪ್ರಯೋಗಿಸಬೇಕಾಗುತ್ತದೆ ಎಂದು ಗುಡುಗಿದ್ದರು. ಇಷ್ಟಾದರೂ ಯಾವ ನಾಯಕರೂ ಮರಳುವ ಯೋಚನೆ ಮಾಡಿರಲಿಲ್ಲ. ಆದರೀಗ ಸ್ಪೀಕರ್ ಗೆ ಸಲ್ಲಿಸಿರುವ ದೂರಿನ ಮೇರೆಗೆ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅನರ್ಹರಾಗುವ ಭೀತಿಯಲ್ಲಿದ್ದಾರೆ.
ಇಬ್ಬರು ಶಾಸಕರು ಅನರ್ಹರೆಂದು ಇಂದು ಸಂಜೆ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಹೀಗೆ ಆಗಿದ್ದೇ ಆದಲ್ಲಿ ಇದು ಈ ಇಬ್ಬರು ನಾಯಕರ ರಾಜಕೀಯ ಭವಿಷ್ಯವನ್ನು ಕೊನೆಗಾಣಿಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.