ಸ್ಪೀಕರ್‌ ರಮೇಶ್ ಕುಮಾರ್‌ಗೆ ಅತೃಪ್ತರು ಸಡ್ಡು?

Published : Jul 23, 2019, 09:12 AM IST
ಸ್ಪೀಕರ್‌ ರಮೇಶ್ ಕುಮಾರ್‌ಗೆ ಅತೃಪ್ತರು ಸಡ್ಡು?

ಸಾರಾಂಶ

ರಾಜೀನಾಮೆ ನೀಡಿ ನಡೆದಿರುವ ಅತೃಪ್ತರು ಸ್ಪೀಕರ್ ಗೆ ಸಡ್ಡು ಹೊಡೆಯುವ ಸಾಧ್ಯತೆ ಇದೆ. ಅವರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. 

ಬೆಂಗಳೂರು[ಜು.23] : ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ನಿಗದಿಯಂತೆ ಮಂಗಳವಾರ ವಿಧಾನಸಭೆ ಸ್ಪೀಕರ್‌ ಮುಂದೆ ವಿಚಾರಣೆಗೆ ಹಾಜರಾಗುವುದು ಅನುಮಾನವಿದೆ.

ಶಾಸಕರ ರಾಜೀನಾಮೆ ಸಂಬಂಧ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದರಿಂದ ತೀರ್ಪು ಏನು ಬರಲಿದೆ ಎಂದು ಕಾದುನೋಡುವ ತಂತ್ರಕ್ಕೆ ಅತೃಪ್ತರು ಮೊರೆಹೋಗಿದ್ದಾರೆ.

ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಅವರು ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಿಗೆ ನೋಟಿಸ್‌ ನೀಡಿ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ, ಯಾವ ಶಾಸಕರೂ ವಿಚಾರಣೆಗೆ ಹಾಜರಾಗದೆ ಇನ್ನಷ್ಟುಕಾಲಾವಕಾಶ ಕೋರಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸುವಾಗ ಸ್ಪೀಕರ್‌ ಮುಂದೆ ಅತೃಪ್ತರೆಲ್ಲರೂ ಹಾಜರಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದರು. ಆದರೂ, ಸ್ಪೀಕರ್‌ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ತೆರಳುವುದು ಅನಿವಾರ್ಯವಾಗಿತ್ತು. ಈ ಮಧ್ಯೆ ಮಂಗಳವಾರ ಸುಪ್ರೀಂಕೋರ್ಟ್‌ ಮುಂದೆ ಶಾಸಕರ ರಾಜೀನಾಮೆ ವಿಚಾರದ ಅರ್ಜಿ ವಿಚಾರಣೆಗೆ ಬರುವುದರಿಂದ ತೀರ್ಪು ನೋಡಿಕೊಂಡು ನಂತರ ಸ್ಪೀಕರ್‌ ಭೇಟಿಯಾಗಲು ಅತೃಪ್ತರು ನಿರ್ಧರಿಸಿದ್ದಾರೆ. ಅತೃಪ್ತರು ತಮ್ಮ ವಕೀಲರ ಸೂಚನೆಯಂತೆ ವಿಚಾರಣೆಗೆ ಹೋಗದಿರಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HD Kumaraswamy birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ