ಬಿಜೆಪಿ ನಾಯಕರೊಂದಿಗೆ ಸಾ ರಾ ಮಹೇಶ್ : ಅಚ್ಚರಿ ಭೇಟಿ

Published : Jul 12, 2019, 07:52 AM ISTUpdated : Jul 12, 2019, 09:39 AM IST
ಬಿಜೆಪಿ ನಾಯಕರೊಂದಿಗೆ ಸಾ ರಾ ಮಹೇಶ್ : ಅಚ್ಚರಿ ಭೇಟಿ

ಸಾರಾಂಶ

ಬಿಜೆಪಿ ನಾಯಕರೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಸಾ ರಾ ಮಹೇಶ್ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದು, ಅಚ್ಚರಿ ಉಂಟು ಮಾಡಿದೆ. 

ಬೆಂಗಳೂರು [ಜು.12]: ಅಳಿವು-ಉಳಿವಿನ ಅಂಚಿನಲ್ಲಿರುವ ಮೈತ್ರಿ ಸರ್ಕಾರದ ಉಳಿವಿಗಾಗಿ ಮಿತ್ರ ಪಕ್ಷ ಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ನಡುವೆಯೇ ಗುರುವಾರ ರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರ ಬಲಗೈ ಬಂಟ ಎಂದೇ ಗುರುತಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. 

ಅಳಿವು-ಉಳಿವಿನ ಅಂಚಿನಲ್ಲಿರುವ ಮೈತ್ರಿ ಸರ್ಕಾರದ ಉಳಿವಿಗಾಗಿ ಮಿತ್ರ ಪಕ್ಷಗಳ ಮುಖಂಡರು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ನಡುವೆಯೇ ಗುರುವಾರ ರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಲಗೈ ಬಂಟ ಎಂದೇ ಗುರುತಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯ ರಾಜಕಾರಣವು ಸೂಕ್ಷ್ಮಪರಿಸ್ಥಿತಿಯಲ್ಲಿರುವ ವೇಳೆ ನಗರದ ಕುಮಾರಕೃಪಾ ವಸತಿಗೃಹದಲ್ಲಿ ಸಚಿವ ಮಹೇಶ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭೇಟಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ ನಡೆಯ ಬಗ್ಗೆ ರಾಜಕೀಯ ವಲಯದಲ್ಲಿ ಇನ್ನಿಲ್ಲದ ಚರ್ಚೆಗೆ ಗ್ರಾಸವಾಗಿದೆ. 

ಮೈತ್ರಿ ಸರ್ಕಾರದ ಹತಾಶೆಯ ಪ್ರಯತ್ನ ನಡೆಸಿತ್ತೆ ಅಥವಾ ಬಿಜೆಪಿಯೊಂದಿಗೆ ಹೊಂದಾಣಿಕೆಯ ಮಾತುಕತೆ ಏನಾದರೂ ನಡೆಸಲಾಗಿದೆಯೇ ಎಂಬ ಮಾತುಗಳು ರಾಜಕೀಯದಲ್ಲಿ ಕೇಳಿಬಂದಿವೆ. ಮಿತ್ರಪಕ್ಷಗಳ ನಡುವೆ ಸಮನ್ವಯ ಕೊರತೆಯಿಂದಾಗಿ ಭಿನ್ನಮತ ಉಲ್ಬಣಗೊಂಡಿವೆ. ಹೀಗಾಗಿ ಬಿಜೆಪಿಯೊಂದಿಗೆ ಕೈ ಜೋಡಿಸುವ ತಂತ್ರವೇನಾದರೂ ಹೆಣೆಯಲಾಗಿದೆಯೇ, ಜೆಡಿಎಸ್-ಬಿಜೆಪಿಯ ಸಂಪರ್ಕ ಸೇತುವೆಯಾಗಿ ಮಹೇಶ್ ಕೆಲಸ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವವಾಗಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ