ಅತೃಪ್ತರಿಗೆ ಇಲ್ಲಿರಲು ಏನು ಮುಳ್ಳು ಚುಚ್ಚುಕೊಂಡಿತ್ತಾ?

Published : Jul 23, 2019, 08:52 AM IST
ಅತೃಪ್ತರಿಗೆ ಇಲ್ಲಿರಲು ಏನು ಮುಳ್ಳು ಚುಚ್ಚುಕೊಂಡಿತ್ತಾ?

ಸಾರಾಂಶ

ಅತೃಪ್ತರಿಗೆ ಇಲ್ಲಿರಲು ಏನು ಮುಳ್ಳು ಚುಚ್ಚುಕೊಂಡಿತ್ತಾ?| ಅವರು ಬೆಂಗಳೂರಿಗೆ ಬಂದರೆ ನಮ್ಮ ಪರವಾಗಿರುತ್ತಾರೆ

ಬೆಂಗಳೂರು[ಜು.23]: ಅತೃಪ್ತ ಶಾಸಕರು ಅವರು ಹೇಳಿಕೊಂಡಿರುವಂತೆ ಮುಂಬೈ ರೆಸಾರ್ಟ್‌ನಲ್ಲಿ ಖುಷಿಯಾಗಿಲ್ಲ. ಖುಷಿಯಾಗಿದ್ದಿದ್ದರೆ ಅವರು ಇಲ್ಲೇ ಇರಬಹುದಿತ್ತು. ಇಲ್ಲೇನು ಮುಳ್ಳು ಚುಚ್ಚಿಕೊಂಡಿತ್ತಾ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸೋಮವಾರ ಸದನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರು ಬೆಂಗಳೂರಿಗೆ ಬಂದರೆ ಅವರು ನಮ್ಮ ಪರವಾಗಿಯೇ ಇರುತ್ತಾರೆ ಎಂದರು.

ಸದನದಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡುವ ತೀರ್ಮಾನ ಸ್ಪೀಕರ್‌ ವಿವೇಚನೆಗೆ ಬಿಟ್ಟಿದ್ದು. ವಿಶ್ವಾಸಮತ ಯಾಚನೆ ಮಾಡ್ತೀವಿ ಎಂದು ಸದನದಲ್ಲಿ ಹೇಳಿದ್ದೇವೆ. ಅದರಂತೆ ಸ್ಪೀಕರ್‌ ತೀರ್ಮಾನಿಸುತ್ತಾರೆ. ವಿಪ್‌ ಜಾರಿಗೆ ಸಂಬಂಧಿಸಿದಂತೆ ನಮ್ಮ ಹಕ್ಕು ಚ್ಯುತಿಯಾಗುವ ಬಗ್ಗೆ ಕಾಂಗ್ರೆಸ್‌ನಿಂದ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ. ಮಂಗಳವಾರ ಆ ಅರ್ಜಿ ವಿಚಾರಣೆಗೆ ಬರಲಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ