
ಬೆಂಗಳೂರು[ಜು.19]: ಕಳೆದೆರಡು ವಾರದಿಂದ ನಡೆಯುತ್ತಿರುವ ರಾಜಕೀಯ ಪ್ರಹಸನ ಕೊನೆಗಾಣುತ್ತಿಲ್ಲ. ದೋಸ್ತಿ ನಾಯಕರು ಅಧಿಕಾರ ಉಳಿಸಿಕೊಳ್ಳಲು ಹೆಣಗಾಣುತ್ತಿದ್ದರೆ, ಅತ್ತ ಬಿಜೆಪಿ ನಾಯಕರು ವಿಶ್ವಾಸಮತ ಮಂಡಿಸಿ ಎಂದು ಪಟ್ಟು ಹಿಡಿದಿದ್ದಾರೆ. ಇನ್ನೇನು ಈ ಎಲ್ಲಾ ಹೈಡ್ರಾಮಾ ಕೊನೆಗಾಣಲಿದೆ ಎನ್ನುವಷ್ಟರಲ್ಲಿ ವಿಶ್ವಾಸಮತ ಮಂಡನೆ ವಿಳಂಬವಾಗುತ್ತಿದೆ. ಹೀಗಿರುವಾಗ ಮತ್ತೊಂದೆಡೆ ಟ್ವಿಟರ್ನಲ್ಲಿ ಹರಿದುಹೋದ ಸ್ಪೀಕರ್ ಬಹಳಷ್ಟು ಸೌಂಡ್ ಮಾಡಲಾರಂಭಿಸಿದೆ.
ಹೌದು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳಿಂದ ಜನರೆಲ್ಲಾ ಬೇಸತ್ತಿದ್ದಾರೆ. ಹೀಗಿದ್ದರೂ ರಾಜಕೀಯ ನಾಯಕರ ಕಿತ್ತಾಟ ಮುಂದುವರೆದಿದೆ. ಅತೃಪ್ತ ಶಾಸಕರನ್ನು ಮರಳಿ ಕರೆತರಲು ದೋಸ್ತಿ ನಾಯಕರು ಎಲ್ಲಾ ಪ್ರಯತ್ನಗಳನ್ನು ನಡೆಸಿದ್ದು, ಯಾವುದೂ ಫಲಿಸಿಲ್ಲ. ಹೀಗಿರುವಾಗ ಸಿಎಂ ಕುಮಾರಸ್ವಾಮಿ ಕೊನೆಯ ಯತ್ನ ಎಂಬಂತೆ ವಿಶ್ವಾಸಮತ ಮಂಡನೆಯ ದಾಳವೆಸೆದಿದ್ದರು. ಸ್ಪೀಕರ್ ರಮೇಶ್ ಕುಮಾರ್ ಗುರುವಾರ 11 ಗಂಟೆಗೆ ವಿಶ್ವಾಸಮತ ಮಂಡನೆಗೆ ದಿನಾಂಕ ನಿಗದಿಪಡಿಸಿದ್ದರಾದರೂ, ದೋಸ್ತಿ ನಾಯಕರು ಸುಪ್ರೀಂ ತೀರ್ಪು ಉಲ್ಲೇಖಿಸಿ ಕ್ರಿಯಾಲೋಪವೆತ್ತಿ ತಂತ್ರಗಾರಿಕೆ ಮೆರೆದಿದ್ದರು. ಆದರೆ ಇದರಿಂದ ಕುಪಿತಗೊಂಡ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಹೂಡಿಸಿದ್ದರು.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ 'ಹರಿದು ಹೋದ ಸ್ಪೀಕರ್' ಭಾರೀ ಸೌಂಡ್ ಮಾಡುತ್ತಿದೆ. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸೇರಿ ನೆಟ್ಟಿಗರು ’ಸ್ಪೀಕರ್’ ಫೋಟೋ ಶೇರ್ ಮಾಡಿದ್ದಾರೆ.
ಈ ಕುರಿತಾಗಿ ಬಿಜೆಪಿ ನಾಯಕ ಕೆ. ಎಸ್ ಈಶ್ವರಪ್ಪ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದೆ.
ಇಂತಹ ಟ್ವೀಟ್ ವೈರಲ್ ಆಗುತ್ತಿದ್ದ ಬೆನ್ನಲ್ಲೇ ಯಕ್ಷಗಾನ ಸಂಘಟಕ ಅನಿಲ್ ಕುಮಾರ್ ಶೆಟ್ಟಿ ಪ್ರಕಟಣೆಯೊಂದನ್ನು ಹೊರಡಿಸಿ 'ರವೀಂದ್ರ ಕಲಾಕ್ಷೇತ್ರದ ಎಲ್ಲಾ ಸ್ಪೀಕರ್ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿವೆ,. ವದಂತಿಗಳಿಗೆ ಕಿಡಿಗೊಡಬೇಡಿ. ಇಂದಿನ ಕಾರ್ಯಕ್ರಮ ಸುಸೂತ್ರವಾಗಿ ಜರುಗಲಿದೆ' ಎಂದೂ ಸ್ಪಷ್ಣನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.