
ಬೆಂಗಳೂರು [ಜು.17] : ರಾಜ್ಯ ರಾಜ್ಯಕೀಯದಲ್ಲಿ ಪ್ರಹಸನ ನಡೆಯುತ್ತಿದೆ. ಸುಪ್ರೀಂಕೋರ್ಟ್ ಸುದೀರ್ಘ ವಿಚಾರಣೆ ಬಳಿಕ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಈ ತೀರ್ಪನ್ನು ತಾವು ಸ್ವಾಗತ ಮಾಡುವುದಾಗಿ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರಾಜೀನಾಮೆ ನೀಡಿದಾಗ ಸ್ಪೀಕರ್ ಯಾವ ನಿಲುವು ತೆಗೆದುಕೊಳ್ಳಬೇಕು ಎನ್ನುವುದನ್ನು ಸುಪ್ರೀಂಕೋರ್ಟ್ ಹೇಳಿದೆ. ಶಾಸಕರು ವಿಶ್ವಾಸಮತಕ್ಕೆ ಹಾಜರಾಗಲು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದೆ. ಇನ್ನು ವಿಪ್ ಜಾರಿ ಮಾಡುವಂತದ್ದು ಇಲ್ಲ ಎಂದು ಶೆಟ್ಟರ್ ಹೇಳಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಜ್ಯ ರಾಜಕೀಯ ವಿದ್ಯಮಾನದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ಮುಂದಿನ ನಿರ್ಧಾರ ಮಾನ್ಯ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಬಿಟ್ಟಿದ್ದು. ಸ್ಪೀಕರ್ ಈಗ ಸೂಕ್ಷ್ಮವಾಗಿಯೇ ನಿರ್ಧಾರ ಕೈಗೊಳ್ಳಬೇಕು ಎಂದು ಶೆಟ್ಟರ್ ಹೇಳಿದರು.
15 ಶಾಸಕರು ಅಸಮಾಧಾನಗೊಂಡು ರಾಜೀನಾಮೆ ನೀಡಿ ಹೊರಬಂದಾಗಲೇ ಸಿಎಂ ರಾಜೀನಾಮೆ ನೀಡಬೇಕಿತ್ತು. ಇಲ್ಲಿಯವರೆಗೂ ಕೂಡ ಅರಾಜಕತೆ ಸೃಷ್ಟಿ ಮಾಡುವ ಅಗತ್ಯ ಇರಲಿಲ್ಲ ಎಂದು ಶೆಟ್ಟರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.