
ಬೆಂಗಳೂರು [ಜು.19] : ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತ ಯಾಚನೆ ನಿರ್ಣಯ ಚರ್ಚೆ ವೇಳೆ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕ್ರಿಯಾಲೋಪ ಮಂಡಿಸಿ ಇಡೀ ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಮೈತ್ರಿಕೂಟದ ತಂತ್ರಕ್ಕೆ ರಾಜ್ಯಪಾಲರು ಬ್ರೇಕ್ ಹಾಕಿದ್ದಾರೆ. ವಿಶ್ವಾಸಮತಕ್ಕೆ ಶುಕ್ರವಾರ ಮಧ್ಯಾಹ್ನ 1.30ರ ಗಡುವು ವಿಧಿಸಿದ್ದಾರೆ. ಇನ್ನು ಈ ವೇಳೆ ರಾಜ್ಯ ಪಾಳರು ಮುಂದೇನು ಮಾಡಬಹುದು.
- ವಿಶ್ವಾಸಮತ ಯಾಚನೆಗೆ ನೀಡಿರುವ ಗಡುವು ಕುರಿತು ಮೈತ್ರಿಕೂಟ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ರಾಜ್ಯಪಾಲರ ಕೈ ಕಟ್ಟಿಹಾಕಿದಂತಾಗುತ್ತದೆ.
- ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ, ಹಾಗಾಗಿ ತೀರ್ಪು ಬರುವವರೆಗೂ ನೀವು ನೀಡಿರುವ ಗಡುವನ್ನು ಹಿಂಪಡೆಯಿರಿ ಎಂದು ಮೈತ್ರಿಕೂಟ ಮನವಿ ಮಾಡಿದರೆ, ಅದನ್ನು ತಿರಸ್ಕರಿಸಬಹುದು.
- ನೀಡಿರುವ ಗಡುವಿನೊಳಗೆ ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆ ಮಾಡದಿದ್ದರೆ ಆಗ ಈ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸಬಹುದು.
- ತನ್ಮೂಲಕ ಸರ್ಕಾರವನ್ನು ವಜಾಗೊಳಿಸಿ, ವಿಧಾನಸಭೆಯನ್ನು ಅಮಾನತಿನಲ್ಲಿಡಬಹುದು.
- ವಿಧಾನಸಭೆಯನ್ನು ಅಮಾನತಿನಲ್ಲಿಟ್ಟನಂತರ ತಮಗೆ ಬಹುಮತವಿದೆ ಎಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರು ಮನವಿ ಮಾಡಿದರೆ ಅವರಿಗೆ ಸರ್ಕಾರ ರಚಿಸಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.