
ಬೆಂಗಳೂರು[ಜು.17]: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆರ್.ರೋಷನ್ ಬೇಗ್, ಡಾ.ಕೆ.ಸುಧಾಕರ್ ಮತ್ತು ಎಂ.ಟಿ.ಬಿ.ನಾಗರಾಜ್ ಅವರ ವಿಚಾರಣೆಯನ್ನು ಬುಧವಾರ ಸಭಾಧ್ಯಕ್ಷ ರಮೇಶ್ ಕುಮಾರ್ ನಡೆಸಲು ದಿನ ನಿಗದಿಪಡಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ಮೂವರ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ರಮೇಶ್ ಕುಮಾರ್ ತಿಳಿಸಿದ್ದರು. ಆದರೆ, ಇಬ್ಬರು ಮುಂಬೈನಲ್ಲಿ ಅತೃಪ್ತರ ಬಣದೊಂದಿಗೆ ಸೇರಿದ್ದಾರೆ. ಹೀಗಾಗಿ ವಿಚಾರಣೆಗೆ ಬರುವುದು ಅನುಮಾನ ಇದೆ.
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ರೋಷನ್ ಬೇಗ್ ಅವರು ಆಗಮಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಅಲ್ಲದೇ, ಸುಪ್ರೀಂಕೋರ್ಟ್ನ ತೀರ್ಪು ಪ್ರಕಟವಾಗುವುದರಿಂದ ವಿಚಾರಣೆ ನಡೆಸುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.