
ಬೆಂಗಳೂರು [ಜು.15] : ರಾಜ್ಯ ರಾಜಕೀಯದಲ್ಲಿ ಪ್ರಹಸನ ಮುಂದುವರಿದಿದೆ. ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಆತಂಕದ ಛಾಯೆ ಮೂಡಿದೆ. ಬಿಸಿ ಬಿಸಿ ಚರ್ಚೆಯ ನಡುವೆ ಅನುಮಾನಗಳು ಮೂಡಲಾರಂಭಿಸಿವೆ.
ಇಂದೇ ಬಿಜೆಪಿ ವಿಶ್ವಾಸ ಮತಕ್ಕೆ ಪಟ್ಟು ಹಿಡಿದು ಸರ್ಕಾರ ಪತನ ಮಾಡಲಿದೆ ಎನ್ನುವ ಚರ್ಚೆ ಶರುವಾಗಿದೆ. ರಾಜ್ಯದಲ್ಲಿ ಸರ್ಕಾರ ಉಳಿಸಿ ಕೊಳ್ಳಲು ಹಲವು ರೀತಿಯ ಸರ್ಕಸ್ ನಡೆಸುತ್ತಿದ್ದು, ಉಳಿಯುತ್ತಾ, ಪತನವಾಗುತ್ತಾ ಎನ್ನುವ ಚರ್ಚೆ ಆರಂಭವಾಗಿದೆ.
ಇನ್ನು ಇದೇ ವೇಳೆ ಕಾಂಗ್ರೆಸ್ ನ ಮತ್ತೆ ನಾಲ್ವರು ಅತೃಪ್ತರು ಜೊತೆ ಸಂಪರ್ಕದಲ್ಲಿ ಇದ್ದಾರೆ ಎನ್ನುವ ಸುದ್ದಿ ಹಬ್ಬಿದ್ದು, ಇದರಿಂದ ಆತಂಕ ಇನ್ನೂ ಹೆಚ್ಚಾಗಿದೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಒಂದು ವೇಳೆ ವಿಶ್ವಾಸ ಮತದಲ್ಲಿ ಸೋತರೆ ಸಿದ್ದರಾಮಯ್ಯ ಹೇಳಿದಂತೆ ವಿರೋಧ ಪಕ್ಷದಲ್ಲಿ ಕುಳಿತರೆ ಮುಂದಿನ ಚುನಾವಣೆಯಲ್ಲಾದರೂ ಅಧಿಕಾರಕ್ಕೆ ಬರಬಹುದಾ ಎನ್ನುವುದು ಪ್ರಶ್ನೆಯಾಗಿದೆ. ಇಂದು ಸದನ ಮಕ್ತಾಯದ ವೇಳೆ ಸರ್ಕಾರದ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.