Breaking News: ಡಿಕೆಶಿ ಸಚಿವ ಸ್ಥಾನ ಪಕ್ಕಾ..! ಜಾರ್ಜ್’ಗಿಲ್ಲ ನಗರಾಭಿವೃದ್ದಿ ಖಾತೆ..?

Published : Jun 05, 2018, 10:46 PM IST
Breaking News: ಡಿಕೆಶಿ ಸಚಿವ ಸ್ಥಾನ ಪಕ್ಕಾ..! ಜಾರ್ಜ್’ಗಿಲ್ಲ ನಗರಾಭಿವೃದ್ದಿ ಖಾತೆ..?

ಸಾರಾಂಶ

ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದ ಜಾರ್ಜ್ ಅವರಿಗೆ ಆ ಖಾತೆ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್’ಗೆ ಗೃಹಖಾತೆ ಜತೆಗೆ ಹೆಚ್ಚುವರಿಯಾಗಿ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗಲಿದೆ ಎಂದು ಸುವರ್ಣನ್ಯೂಸ್’ಗೆ ಕಾಂಗ್ರೆಸ್’ನ ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು[ಜೂ.05]: ಕೆ.ಜೆ ಜಾರ್ಜ್’ಗೆ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗುವ ಸಾಧ್ಯತೆಗಳಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿದ್ದ ಜಾರ್ಜ್ ಅವರಿಗೆ ಆ ಖಾತೆ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್’ಗೆ ಗೃಹಖಾತೆ ಜತೆಗೆ ಹೆಚ್ಚುವರಿಯಾಗಿ ಬೆಂಗಳೂರು ನಗರಾಭಿವೃದ್ದಿ ಖಾತೆ ಸಿಗಲಿದೆ ಎಂದು ಸುವರ್ಣನ್ಯೂಸ್’ಗೆ ಕಾಂಗ್ರೆಸ್’ನ ಉನ್ನತ ಮೂಲಗಳು ತಿಳಿಸಿವೆ. ಸಚಿವರ ಪಟ್ಟಿಯಲ್ಲಿ ಜಾರ್ಜ್ ಹೆಸರಿದ್ದು ಅವರಿಗೆ ಯಾವ ಖಾತೆ ಸಿಗಲಿದೆ ಎನ್ನುವುದು ಸಾಕಷ್ಟು ಕುತೂಹಲಕ್ಕೀಡು ಮಾಡಿಕೊಟ್ಟಿದೆ.
ಇನ್ನು ಮಾಜಿ ಇಂಧನ ಸಚಿವ ಡಿ.ಕೆ ಶಿವಕುಮಾರ್’ಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಸಚಿವರ ಪಟ್ಟಿಯನ್ನು ಫೈನಲ್ ಮಾಡಿದ್ದು, ಸಮ್ಮಿಶ್ರ ಸರ್ಕಾರದಲ್ಲಿ ಒಟ್ಟು 17 ಜನ ಕಾಂಗ್ರೆಸ್ ಶಾಸಕರು ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಕೆ.ಜೆ ಜಾರ್ಜ್, ರೋಷನ್ ಬೇಗ್, ಕೃಷ್ಣ ಭೈರೇಗೌಡ, ಎಂಬಿ ಪಾಟೀಲ್, ರಾಜಶೇಖರ ಪಾಟೀಲ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ರೂಪಾ ಶಶಿಧರ್ ಸೇರಿದಂತೆ 17 ಶಾಸಕರಿಗೆ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮ್ಮ ಅಥ್ವಾ ಸತ್ತವರ ಬ್ಯಾಂಕ್​ ಖಾತೆ ನಿಷ್ಕ್ರಿಯವಾಗಿದ್ರೆ ಚಿಂತೆ ಬೇಡ: ಕೂಡಲೇ ಹೀಗೆ ಮಾಡಿ ಹಣ ಪಡೆಯಿರಿ
ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌ ನೀಡಿದ ಇಲಾಖೆ, ಋತುಚಕ್ರ ರಜೆಗೆ ಗ್ರೀನ್‌ ಸಿಗ್ನಲ್‌!