ವಿಶ್ವಾಸಮತ ಯಾಚನೆಗೆ ರೆಡಿ ಇಲ್ವಾ ಸಿಎಂ ಕುಮಾರಸ್ವಾಮಿ?

Published : Jul 15, 2019, 12:43 PM IST
ವಿಶ್ವಾಸಮತ ಯಾಚನೆಗೆ ರೆಡಿ ಇಲ್ವಾ ಸಿಎಂ ಕುಮಾರಸ್ವಾಮಿ?

ಸಾರಾಂಶ

ವಿಶ್ವಾಸಮತ ಯಾಚನೆಗೆ ರೆಡಿ ಇಲ್ವಾ ಸಿಎಂ ಕುಮಾರಸ್ವಾಮಿ?| ವಿಶ್ವಾಸಮತಯಾಚನೆ ಕುರಿತು ಅಧಿಕೃತ ಪತ್ರವನ್ನೇ ಕೊಟ್ಟಿಲ್ಲ ಸಿಎಂ| ವಿಧಾನಸಭೆ ಕಾರ್ಯದರ್ಶಿಗೆ ಇನ್ನೂ ಕೊಟ್ಟಿಲ್ಲ ಅಧಿಕೃತ ಲಿಖಿತ ಪತ್ರ

ಬೆಂಗಳೂರು[ಜು.15]: ಕಳೆದೆರಡು ವಾರದಿಂದ ನಡೆಯುತ್ತಿರುವ ರಾಜ್ಯ ರಾಜಕೀಯ ಹೈಡ್ರಾಮಾ ಇಂದು ಸೋಮವಾರವೂ ಮುಂದುವರೆದಿದೆ. ಒಂದೆಡೆ ಸ್ಪೀಕರ್ ರಾಜೀನಾಮೆ ಅಂಗೀಕರಿಸಲು ತಡ ಮಾಡುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸುಪ್ರೀಂ ಮೆಟ್ಟಿಲೇರಿದ್ದರೆ, ಇತ್ತ ಸಿಎಂ ಕುಮಾರಸ್ವಾಮಿ ತಾನು ವಿಶ್ವಾಸಮತ ಯಾಚಿಸುವುದಾಗಿ ಹೊಸ ಅಸ್ತ್ರ ಎಸೆದಿದ್ದರು. ಆದರೀಗ ಹೊಸ ಅಸ್ತ್ರ ಪ್ರಯೋಗಿಸಿದ ಕುಮಾರಸ್ವಾಮಿ ಹೊಸ ತಂತ್ರ ಹೂಡಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.

ಹೌದು ಶುಕ್ರವಾರ ಸುಪ್ರೀಂ ಕೋರ್ಟ್ ತನ್ನ ತೀರ್ಪು ಮುಂದೂಡಿದ ಬೆನ್ನಲ್ಲೇ ಅಚ್ಚರಿಯ ಬೆಳವಣಿಗೆಯೊಂದು ನಡೆದಿತ್ತು. ವಿಧಾನಸೌಧ್ಕಕೆ ಆಗಮಿಸಿದ್ದ ಕುಮಾರಸ್ವಾಮಿ ತಾವು ವಿಶ್ವಾಸಮತ ಯಾಚಿಸುತ್ತೇನೆ ಎನ್ನುವ ಮೂಲಕ ತಮ್ಮ ದಾಳ ಎಸೆದಿದ್ದರು. ಕುಮಾರಸ್ವಾಮಿಯವರ ಈ ಅಸ್ತ್ರ ಅತೃಪ್ತ ಶಾಸಕರು ಸೇರಿದಂತೆ ವಿಪಕ್ಷಕ್ಕೆ ಶಾಕ್ ಕೊಟ್ಟಿತ್ತು. ಆದರೀಗ ಈ ದಾಳದ ಹಿಂದೆ ಬೇರೆಯೃ ತಂತ್ರವಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಗೆ ರೆಡಿ ಎಂದಿದ್ದ ಸಿಎಂ ಈ ಕುರಿತಾಗಿ ಸ್ಪೀಕರ್ಗೆ ಅಧಿಕೃತ ಪತ್ರ ನೀಡಬೇಕಿತ್ತು. ಆದರೆ ಸಿಎಂ ಕುಮಾರಸ್ವಾಮಿ ವಿಧಾನಸಭೆ ಕಾರ್ಯದರ್ಶಿಗೆ ಇನ್ನೂ ಅಧಿಕೃತ ಲಿಖಿತ ಕೊಟ್ಟಿಲ್ಲ. ಹೀಗಾಗಿ ಸಿಎಂ ವಿಶ್ವಾಸಮತಯಾಚನೆ ಕೋರುತ್ತಾರೋ ? ಇಲ್ಲವೋ? ಅಥವಾ ವಿಶ್ವಾಸಮತಯಾಚನೆ ಹೇಳಿಕೆ ನಂತರ ನಿಲುವು ಬದಲಿಸಿದ್ರಾ ಎಂಬ ಪ್ರಶ್ನೆಗಳ ಸರಮಾಲೆ ಎದ್ದಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ: ಎಸ್‌ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ
ಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ