
ಬೆಂಗಳೂರು [ಜು.25] : ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಪ್ರತಿಪಕ್ಷದ ನಾಯಕನ ಸ್ಥಾನವನ್ನೂ ಅಲಂಕರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ.
ಸಂಖ್ಯಾಬಲದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿರುವುದರಿಂದ ಪ್ರತಿಪಕ್ಷದ ನಾಯಕನ ಸ್ಥಾನ ಸಹಜವಾಗಿಯೇ ಆ ಪಕ್ಷಕ್ಕೆ ಸೇರಲಿದೆ.
ಒಂದು ವೇಳೆ ಉಭಯ ಪಕ್ಷಗಳು ಮೈತ್ರಿ ಕೂಟ ಮುಂದುವರೆಸಿ ಜಂಟಿಯಾಗಿ ತಮ್ಮ ನಾಯಕನನ್ನಾಗಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡು ಸ್ಪೀಕರ್ಗೆ ಪತ್ರ ಬರೆದು ಕೊಟ್ಟಲ್ಲಿ ಮಾತ್ರ ಪ್ರತಿಪಕ್ಷದ ನಾಯಕನ ಸ್ಥಾನ ಅವರ ಪಾಲಾಗಬಹುದು. ಇಲ್ಲದಿದ್ದರೆ ಜೆಡಿಎಸ್ ಶಾಸಕಾಂಗ ನಾಯಕರಾಗಿ ಮಾತ್ರ ಮುಂದುವರೆಯುತ್ತಾರೆ. ಸದ್ಯದ ಸನ್ನಿವೇಶದಲ್ಲಿ ಮೈತ್ರಿ ಕೂಟ ಆ ಮಟ್ಟಕ್ಕೆ ಮುಂದುವರೆಯುವ ಸಾಧ್ಯತೆ ಇಲ್ಲವೇ ಇಲ್ಲ ಎನ್ನಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.