
ಬೆಂಗಳೂರು[ಜು.08]: ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲಿ ಆರಂಭವಾದ ದೋಸ್ತಿ ಸರ್ಕಾರದ ಪತನ ಇಂದು ಸೋಮವಾರ ಅಂತಿಮ ಹಂತ ತಲುಪಿದೆ. ಶನಿವಾರದಂದು 12ಕ್ಕೂ ಹೆಚ್ಚು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವಿಚಾರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಇದೀಗ ಅಂತಿಮವಾಗಿ ಡಿಸಿಎಂ ಡಾ. ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಮೂವರು ಕಾಂಗ್ರೆಸ್ ಸಚಿವರು ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ.
"
ರಾಜೀನಾಮೆ ನೀಡಿದವರು ಯಾರು?
ಡಾ.ಜಿ.ಪರಮೇಶ್ವರ್
ಡಿ.ಕೆ.ಶಿವಕುಮಾರ್
ಕೆ.ಜೆ. ಜಾರ್ಜ್
ಕೃಷ್ಣಬೈರೇಗೌಡ
ಶಿವಶಂಕರ ರೆಡ್ಡಿ
ಪ್ರಿಯಾಂಕ್ ಖರ್ಗೆ
ಯು.ಟಿ.ಖಾದರ್
ಜಮೀರ್ ಅಹ್ಮದ್
ವೆಂಕಟರಮಣಪ್ಪ
ರಾಜಶೇಖರ್ ಪಾಟೀಲ್
ಪುಟ್ಟರಂಗಶೆಟ್ಟಿ
ಶಂಕರ್
ಜಯಮಾಲ
ರಹೀಂ ಖಾನ್
ಸತೀಶ್ ಜಾರಕಿಹೊಳಿ
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಜೀನಾಮೆ ನೀಡದವರು ಯಾರು?
ಆರ್.ವಿ.ದೇಶಪಾಂಡೆ
ಶಿವಾನಂದಪಾಟೀಲ್
ಎಂಟಿಬಿ ನಾಗರಾಜ್
ತುಕಾರಾಂ
19 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ನಾಲ್ವರು ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದಾರೆ. ಈ ನಾಲ್ವರು ಇಂದು ಬೆಳಗ್ಗೆ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ನಡೆದಿದ್ದ ಸಭೆಗೂ ಗೈರಾಗಿದ್ದರು ಎಂಬುವುದು ಉಲ್ಲೇಖನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.