ಆಪರೇಷನ್‌ ಗುಪ್ತ ಸಂಕ್ರಾಂತಿ: ದಿಲ್ಲಿಯಲ್ಲಿ ಬಿಜೆಪಿ ಮೀಟ್-ಮೈತ್ರಿ ಸರ್ಕಾರ ಶೇಕ್ !

Published : Jan 15, 2019, 12:35 PM IST
ಆಪರೇಷನ್‌ ಗುಪ್ತ ಸಂಕ್ರಾಂತಿ: ದಿಲ್ಲಿಯಲ್ಲಿ ಬಿಜೆಪಿ ಮೀಟ್-ಮೈತ್ರಿ ಸರ್ಕಾರ ಶೇಕ್ !

ಸಾರಾಂಶ

ಕರ್ನಾಟಕದಲ್ಲಿ ಸರ್ಕಾರ ರಚಿಸಿ ಲೋಕಸಭಾ ಚುನಾವಣೆಗೆ ಗರಿಷ್ಠ ಸೀಟು ಗೆಲ್ಲೋ ಲೆಕ್ಕಾಚಾರದಲ್ಲಿರುವ ಬಿಜೆಪಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮುಖಂಡರು ಸಭೆ ನಡೆಸಿದ್ದಾರೆ.  

ನವದೆಹಲಿ(ಜ.15): ಬಿಜೆಪಿಯ ಸರ್ಕಾರ ರಚನೆಯ ಕಸರತ್ತು ದಿಲ್ಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ನೇತೃತ್ವದಲ್ಲಿ ನಡೆಯುತ್ತಿದ್ದರೆ, ಹೈಕಮಾಂಡ್‌ ಮತ್ತು ಯಡಿಯೂರಪ್ಪ ನಡುವೆ ಕೊಂಡಿ ಆಗಿರುವವರು ಬೆಂಗಳೂರಿನ ಶಾಸಕ ಅರವಿಂದ ಲಿಂಬಾವಳಿ. ಅತೃಪ್ತ ಶಾಸಕರ ಜೊತೆ ಮಾತನಾಡಲು ಯಡಿಯೂರಪ್ಪ ನಿಯೋಜಿಸಿರುವುದು ಜಗದೀಶ್‌ ಶೆಟ್ಟರ್‌ ಅವರನ್ನು. ಇನ್ನು ಮಲ್ಲೇಶ್ವರಂ ಶಾಸಕ ಅಶ್ವತ್ಥನಾರಾಯಣ್‌, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌, ಬಾಲಚಂದ್ರ ಜಾರಕಿಹೋಳಿ, ಸಿ.ಪಿ.ಯೋಗೇಶ್ವರ್‌ ಮತ್ತು ಪ್ರದೀಪ್‌ ಶೆಟ್ಟರ್‌ ಸರ್ಕಾರ ರಚನೆಯ ಪ್ರಯತ್ನಕ್ಕೆ ಗ್ರೌಂಡ್‌ನಲ್ಲಿ ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸರ್ಕಾರ ರಚನೆ ಯತ್ನಕ್ಕೆ ಕೊನೆಗೂ ಅಮಿತ್‌ ಶಾ ಎಂಟ್ರಿ!

ಶಾಸಕರ ಸಭೆ ಎಂಬ ಔಪಚಾರಿಕತೆ
ವೆಸ್ಟರ್ನ್‌ ಕೋರ್ಟ್‌ ಹೋಟೆಲ್‌ನಲ್ಲಿ ಎರಡು ದಿನ ನಡೆದ ಶಾಸಕರ ಸಭೆಯಲ್ಲಿ ಚರ್ಚೆ ನಡೆದಿದ್ದಕ್ಕಿಂತ ಊಟ ಉಪಾಹಾರ ಗುಸುಗುಸು ಚರ್ಚೆ ನಡೆದಿದ್ದೇ ಹೆಚ್ಚು. ಸಭೆಯಲ್ಲಿ ಲೋಕಸಭಾ ಚುನಾವಣಾ ತಯಾರಿಯ ಗಂಭೀರ ಚರ್ಚೆ ಇತ್ಯಾದಿ ನಡೆಯಿತು ಎಂದು ಶೋಭಾ, ಈಶ್ವರಪ್ಪ, ಸಿ.ಟಿ.ರವಿ ಮಾಧ್ಯಮಗಳಿಗೆ ಹೇಳುತ್ತಿದ್ದರಾದರೂ ಒಳಗಡೆ ಯಾವುದೇ ಚರ್ಚೆ ನಡೆದಿಲ್ಲ. 

ಇದನ್ನೂ ಓದಿ: ಶೀಘ್ರದಲ್ಲೇ ಕೆಲ ಜಿಲ್ಲೆಯ ಶಾಸಕರಿಗೆ ಶುಭಸುದ್ದಿ: ಬಿ.ಎಸ್.ಯಡಿಯೂರಪ್ಪ!

ಶಾಸಕರು ನಮ್ಮನ್ನು ಊರಿಗೆ ಹೋಗಲು ಬಿಡಿ ಎಂದು ಕೇಳಿಕೊಂಡರೆ, ಯಡಿಯೂರಪ್ಪ ಭಾವನಾತ್ಮಕವಾಗಿ ಮಾತನಾಡಿ ಶಾಸಕರು ಇಲ್ಲೇ ಇರಿ ಎಂದು ಕೇಳಿಕೊಳ್ಳುತ್ತಿದ್ದರು. ಸಭೆ, ಕಾಫಿ ತಿಂಡಿಗೆ ಬರ್ಖಾಸ್‌್ತ ಆಗುತ್ತಿತ್ತು. ದಕ್ಷಿಣ ಕನ್ನಡದ ಊಟ ತಿಂಡಿ ಇದ್ದ ಶಾಸಕರ ಸಭೆಗೆ ಆತಿಥ್ಯ ಕೇಂದ್ರ ಸಚಿವ ಸದಾನಂದ ಗೌಡರದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್
ರಾಜ್ಯದ ತಾಪಮಾನ 12°Cಗೆ ಕುಸಿತ-ಕರುನಾಡಿಗೆ ಶೀತ ಕಂಟಕ ಖಚಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!