
ಬೆಂಗಳೂರು[ಜು.08]: ದೋಸ್ತಿ ಸರ್ಕಾರಕ್ಕೆ ಒಂದಾದ ಬಳಿಕ ಮತ್ತೊಂದರಂತೆ ಬಿಸಿ ತಟ್ಟುತ್ತಿದೆ. ಆನಂದ್ ಸಿಂಗ್ ರಾಜೀನಾಮೆಯಿಂದ ಶುರುವಾದ ಕಂಟಕ ಮುಂದುವರೆದಿದ್ದು, ಈ ಪಟ್ಟಿಗೆ ಇಂದು ಮತ್ತೊಂದು ಹೆಸರು ಸೇರ್ಪಡೆಗೊಂಡಿದೆ. ಸರ್ಕಾರ ಪತನಗೊಳ್ಳುವ ಸೂಚನೆ ಸಿಕ್ಕ ಸಚಿವರೊಬ್ಬರು ಸದ್ದಿಲ್ಲದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಕೈ ಬಿಟ್ಟಿದ್ದಾರೆ. ಎರಡು ವಾರಗಳ ಹಿಂದೆ ಖಾತೆ ದಕ್ಕಿಸಿಕೊಂಡಿದ್ದ ಮುಳಬಾಗಿಲು ಶಾಸಕ ಎಚ್.ನಾಗೇಶ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಎಚ್. ನಾಗೇಶ್ ಇತ್ತೀಚೆಗಷ್ಟೇ ಮೈತ್ರಿ ಸರ್ಕಾರದ ಜೊತೆ ಕೈ ಜೋಡಿಸಿದ್ದರು. ಅಲ್ಲದೇ ಸಣ್ಣ ಕೈಗಾರಿಕೆ ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದರು. ಆದರೀಗ ಸಚಿವ ಸ್ಥಾನಕ್ಕೆ ಪಡೆದ ಮೂರೇ ವಾರಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ಆಘಾತವುಂಟು ಮಾಡಿದ್ದಾರೆ.
ನಾವು ಜೋಡೆತ್ತು ಕಾಂಗ್ರೆಸ್ಗೆ ಕೈ ಕೊಡಲ್ಲ ಎಂದಿದ್ದ ನಾಗೇಶ್ ಈಗ ತಮ್ಮೆಲ್ಲಾ ಮಾತುಗಳನ್ನು ಮರೆತು ದೂರ ಸರಿದಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಲಿರುವ ನಾಗೇಶ್ ಕಾಂಗ್ರೆಸ್ ಸಹ ಸದಸ್ಯತ್ವ ವಾಪಸ್ ಪತ್ರ ಸಲ್ಲಿಸಲಿದ್ದಾರೆ.
Exclusive: ನೂತನ ಸಚಿವರಿಗೆ ಖಾತೆ ಫಿಕ್ಸ್! ಸಿಎಂ ಕ್ಯಾತೆಗೆ ದೋಸ್ತಿ ಸುಸ್ತು!
ಒಟ್ಟು 13 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೀಗ ಪಕ್ಷೇತರ ಶಾಸಕರೊಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೆಂಬಲ ವಾಪಾಸ್ ಪಡೆದಿರುವುದರಿಂದ ಸರ್ಕಾರ ಪತನಗೊಳ್ಳುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ.
ಕರ್ನಾಟಕ ಪಾಲಿಟಿಕ್ಸ್ನ ಇಂಟರೆಸ್ಟಿಂಗ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.