
ಬೆಂಗಳೂರು : ಜಾತ್ಯತೀತ ಜನತಾದಳ ಪಕ್ಷದ ಶಾಸಕನಾಗಿದ್ದರೆ ನಾನು ಈಗಾಗಲೇ ಸಚಿವನಾಗಿರುತ್ತಿದ್ದೆ. ಜೆಡಿಎಸ್ನವರು ನಾನು ಕೇಳುವ ಮೊದಲೇ ಸಚಿವ ಸ್ಥಾನ ನೀಡುತ್ತಿದ್ದರು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಯುವ ಶಾಸಕರಿಗೆ ಆದ್ಯತೆ ನೀಡುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ. ಸುಧಾಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ಜೆ.ಪಿ. ನಗರದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಹಿರಿಯರ ಪಕ್ಷ ಮತ್ತು ಹಳೆಯ ಪಕ್ಷ ಆದ್ದರಿಂದ ನನಗೆ ಸಚಿವ ಸ್ಥಾನ ತಪ್ಪಿದೆ ಎಂದು ಪರೋಕ್ಷವಾಗಿ ಪಕ್ಷದ ನಡೆಯನ್ನು ಟೀಕಿಸಿದರು. ಪ್ರಸ್ತುತ ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ನಿರೀಕ್ಷೆಗಳಿಲ್ಲ. ಆದರೆ, ಹೈಕಮಾಂಡ್ ನಿರ್ಧಾರ ಮಾಡಿ ಸಚಿವ ಸ್ಥಾನ ನೀಡಿದರೆ ಸಚಿವನಾಗಿ ಜನ ಸೇವೆ ಮಾಡಲು ಸಿದ್ಧ. ಸದ್ಯಕ್ಕೆ ಶಾಸಕನಾಗಿ ನಾನು ಮಾಡಬೇಕಾದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.