ರಾಜಭವನದ ಸೌಂದರ್ಯ ಕಣ್ತುಂಬಿಕೊಂಡ ಸಾರ್ವಜನಿಕರು

Published : Aug 24, 2018, 03:58 PM ISTUpdated : Sep 09, 2018, 10:15 PM IST
ರಾಜಭವನದ ಸೌಂದರ್ಯ ಕಣ್ತುಂಬಿಕೊಂಡ ಸಾರ್ವಜನಿಕರು

ಸಾರಾಂಶ

ಜನಸಾಮಾನ್ಯರಿಗೂ ರಾಜಭವನ ಪ್ರವೇಶ ಕಲ್ಪಿಸುವ ಉದ್ದೇಶದಿಂದ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಗಸ್ಟ್ 16ರಿಂದ 31ರವರೆಗೆ ಹದಿನೈದು ದಿನಗಳ ಕಾಲ ಸಾರ್ವಜನಿಕರಿಗೆ ರಾಜಭವನವನ್ನು ಮುಕ್ತಗೊಳಿಸಿದ್ದರು. ಆದರೆ, ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರ ನಿಧನದಿಂದ ಆಗಸ್ಟ್ 16ರಿಂದ 22ರವರೆಗಿನ ರಾಜಭವನ ಪ್ರವೇಶ ಅವಕಾಶವನ್ನು ನಿರ್ಬಂಧಿಸಿದ್ದರು. ಈ ಅವಧಿಗೆ ನೋಂದಣಿ ಮಾಡಿಕೊಂಡವರಿಗೆ ಸೆಪ್ಟೆಂಬರ್ 1ರಿಂದ 6ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು[ಆ.24]: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 23ರಿಂದ ಸೆಪ್ಟೆಂಬರ್ 6ರ ವರೆಗೆ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಗುರುವಾರ 500 ಮಂದಿ ರಾಜಭವನ ಕಣ್ತುಂಬಿಕೊಂಡಿದ್ದಾರೆ.

ಜನಸಾಮಾನ್ಯರಿಗೂ ರಾಜಭವನ ಪ್ರವೇಶ ಕಲ್ಪಿಸುವ ಉದ್ದೇಶದಿಂದ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಗಸ್ಟ್ 16ರಿಂದ 31ರವರೆಗೆ ಹದಿನೈದು ದಿನಗಳ ಕಾಲ ಸಾರ್ವಜನಿಕರಿಗೆ ರಾಜಭವನವನ್ನು ಮುಕ್ತಗೊಳಿಸಿದ್ದರು. ಆದರೆ, ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರ ನಿಧನದಿಂದ ಆಗಸ್ಟ್ 16ರಿಂದ 22ರವರೆಗಿನ ರಾಜಭವನ ಪ್ರವೇಶ ಅವಕಾಶವನ್ನು ನಿರ್ಬಂಧಿಸಿದ್ದರು. ಈ ಅವಧಿಗೆ ನೋಂದಣಿ ಮಾಡಿಕೊಂಡವರಿಗೆ ಸೆಪ್ಟೆಂಬರ್ 1ರಿಂದ 6ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲ ತಂಡವಾಗಿ ಗುರುವಾರ ಭೇಟಿ ನೀಡಿದ ಸಾರ್ವಜನಿಕರು ರಾಜಭವನ ಹಾಗೂ ಆವರಣದಲ್ಲಿ ಸುತ್ತಾಡಿ ಖುಷಿ ಪಟ್ಟರು. ರಾಜಭವನದಲ್ಲಿ ಪ್ರದರ್ಶಿಸಲಾಗಿದ್ದ ಅಪರೂಪದ ಭಾವಚಿತ್ರಗಳು ಹಾಗೂ ಐತಿಹಾಸಿಕ ವಿಷಯಗಳನ್ನು ರಾಜಭವನ ಸಿಬ್ಬಂದಿ, ವೀಕ್ಷಕರಿಗೆ ವಿವರಿಸಿದರು. ವಿಶೇಷ ಸಂದರ್ಭದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಮಾತ್ರ ಸಾರ್ವಜನಿಕರಿಗೆ ರಾಜಭವನಕ್ಕೆ ಅವಕಾಶವಿರುತ್ತದೆ. ನಮ್ಮಂತಹ ಜನಸಾಮಾನ್ಯರಿಗೂ ಅವಕಾಶ ನೀಡಿದ್ದು ಸಂತಸ ತಂದಿದೆ ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು. ರಾಜಭವನ ಪ್ರವೇಶಿಸಲು ಆನ್‌ಲೈನ್ ನೋಂದಣಿಗೆ ಅವಕಾಶ ಮಾಡಿಕೊಡಲಾಗಿತ್ತು. ಈಗಾಗಲೇ ಸೆಪ್ಟೆಂಬರ್ 6ರವರೆಗೆ ಭೇಟಿ ನೀಡಲಿರುವವರ ನೋಂದಣಿ ಪೂರ್ಣಗೊಂಡಿದೆ. ಹೀಗಾಗಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದು, ನೋಂದಣಿ ಮಾಡಿಕೊಂಡವರಿಗೆ ರಾಜಭವನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ರಾಜಭವನದ ಅಧಿಕಾರಿಗಳು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!