MTB ಇಟ್ಟ ಬೇಡಿಕೆಗೆ ಬೆಚ್ಚಿಬಿದ್ರು, ಸಿದ್ದು ಮನೆಯ ಸುದೀರ್ಘ ಮಾತುಕತೆ ವಿಫಲ

Published : Jul 13, 2019, 05:20 PM ISTUpdated : Jul 13, 2019, 05:26 PM IST
MTB ಇಟ್ಟ ಬೇಡಿಕೆಗೆ ಬೆಚ್ಚಿಬಿದ್ರು, ಸಿದ್ದು ಮನೆಯ ಸುದೀರ್ಘ ಮಾತುಕತೆ ವಿಫಲ

ಸಾರಾಂಶ

ಕಾಂಗ್ರೆಸ್ ನಾಯಕರಿಂದ ಶನಿವಾರ ಬೆಳಗ್ಗೆಯಿಂದಲೂ ರಾಜೀನಾಮೆ ಕೊಟ್ಟಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಕೆಲಸ ನಡೆಯುತ್ತಲೇ ಇತ್ತು. ಆದರೆ ಎಂಟಿಬಿ ಇಟ್ಟಿರುವ ಆ ಒಂದು ಬೇಡಿಕೆಗೆ ಸ್ವತಃ ಕಾಂಗ್ರೆಸ್ ನಾಯಕರೇ  ತಬ್ಬಿಬ್ಬಾಗಿದ್ದಾರೆ.

ಬೆಂಗಳೂರು[ಜು. 13] ಸತತ ಮೂರೂವರೆ ಗಂಟೆ ಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ರಾಜೀನಾಮೆ ಹಿಂಪಡೆಯಲು ಎಂಟಿಬಿ ನಾಗರಾಜ್ ಮನವೊಲಿಕೆ ಪ್ರಯತ್ನಗಳು ನಡೆದಿದ್ದು ಅಂತಿಮವಾಗಿ ವಿಫಲವಾಗಿದೆ.

‘ಕುಮಾರಸ್ವಾಮಿ ಸಿಎಂ ಸ್ಥಾನದಲ್ಲಿ ಇದ್ದರೆ ನಾನು ರಾಜೀನಾಮೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ನೀವು ಸಿಎಂ ಆಗುವುದಾದರೆ ಈ ಕೂಡಲೇ ರಾಜೀನಾಮೆ ವಾಪಸ್ ಪಡೆಯುತ್ತೇನೆ’ ಎಂದು ಎಂಟಿಬಿ ಹೇಳಿದ್ದಾರೆ.

ಬಿಜೆಪಿಯ ಮೆಗಾ ಪ್ಲ್ಯಾನ್.. ದೋಸ್ತಿಯಲ್ಲಿ ತಳಮಳ

ಡಿ.ಕೆ.ಶಿವಕುಮಾರ್, ರಿಜ್ವಾನ್ ಅರ್ಷದ್, ಜಮೀರ್ ಅಹಮದ್ ಖಾನ್ ಸಹ ಎಂಟಿಬಿ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಪಟ್ಟರು. ಆದರೆ ಇದೇ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಎಂಟಿಬಿ ಪಟ್ಟು ಹಿಡಿದರು. ನಂತರ ರಾಜೀನಾಮೆ ಕೊಟ್ಟ ಸುಧಾಕರ್ ಅವರ ಜತೆಗೂ ಮಾತನಾಡುತ್ತೇನೆ ಎಂದು ಹೇಳಿ ತೆರಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?