‘ವಿಶ್ವಾಸಮತ ಒಂದು ವ್ಯಾಪಾರ, ಕೆಲವರಿಗೆ ಪೇಮೆಂಟ್ ಮಾಡಾಗಿದೆ, ಅಧಿಕಾರ ಹಿಡಿಯೋ ಒತ್ತಡ ಇದೆ’

Published : Jul 19, 2019, 03:24 PM IST
‘ವಿಶ್ವಾಸಮತ ಒಂದು ವ್ಯಾಪಾರ, ಕೆಲವರಿಗೆ ಪೇಮೆಂಟ್ ಮಾಡಾಗಿದೆ, ಅಧಿಕಾರ ಹಿಡಿಯೋ ಒತ್ತಡ ಇದೆ’

ಸಾರಾಂಶ

ಸದನದ ಒಳಗೂ ವಿಶ್ವಾಸಮತದ ಗದ್ದಲ, ಸದನದ ಹೊರಗೂ ಇದೇ ಚರ್ಚೆ; ಫೇಸ್ಬುಕ್‌ನಲ್ಲಿ ಬಿಜೆಪಿಯನ್ನು ಕೆಣಕಿದ ಸಿದ್ದರಾಮಯ್ಯ

ಬೆಂಗಳೂರು (ಜು.19): ವಿಶ್ವಾಸಮತ ಯಾಚನೆ ಕಲಾಪ ಶುಕ್ರವಾರವೂ ಮುಂದುವರಿದಿದೆ. ಒಂದು ಕಡೆ ಮೈತ್ರಿಕೂಟವು ವಿಶ್ವಾಸಮತದ ಕುರಿತಂತೆ ಚರ್ಚೆ ನಡೆಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ಸೇರಿ ಉದ್ದೇಶಪೂರ್ವಕವಾಗಿ ವಿಶ್ವಾಸ ಮತಯಾಚನೆಯನ್ನು ವಿಳಂಬ ಮಾಡುತ್ತಿದೆ ಎಂದು ಬಿಜೆಪಿಯು ಆರೋಪಿಸಿದೆ.  

ಇನ್ನೊಂದು ಕಡೆ, ರಾಜ್ಯಪಾಲರು ವಿಧಿಸಿದ್ದ ಗಡುವು ಕೂಡಾ ಮುಗಿದಿದ್ದು, ಸ್ಪೀಕರ್ ನಡೆ ಬಿಜೆಪಿ ನಾಯಕರನ್ನು ಕೆರಳಿಸಿದೆ. ತಕ್ಷಣ ವಿಶ್ವಾಸ ಮತ ನಡೆಯಬೇಕೆಂದು ಬಿಜೆಪಿ ಒತ್ತಡ ಹೇರುತ್ತಿದೆ.   ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ವಿಶ್ವಾಸ ಮತ ಕಲಾಪ ಇನ್ನೂ ನಡೆಯುತ್ತಿದೆ. ಅಭಿಪ್ರಾಯ ಮಂಡಿಸಲು 20 ಶಾಸಕರು ಹೆಸರು ನೀಡಿದ್ದಾರೆ. ಅದರ ನಂತರ ವಿಶ್ವಾಸ ಮತ ಯಾಚಿಸಬಹುದಾಗಿದೆ. ಇದನ್ನು ಒಂದು ವ್ಯಾಪಾರವಾಗಿ ಪರಿಗಣಿಸಿರುವ ಬಿಜೆಪಿಯು ಬಹಳ ಒತ್ತಡದಲ್ಲಿದೆ. ಈಗಾಗಲೇ ಕೆಲವರಿಗೆ ಪೇಮೆಂಟ್ ಮಾಡಿರುವುದರಿಂದ ಆದಷ್ಟು ಬೇಗ ಅಧಿಕಾರ ಹಿಡಿಯುವ ಧಾವಂತದಲ್ಲಿದ್ದಾರೆ, ಎಂದು ಸಿದ್ದರಾಮಯ್ಯ ಕೆಣಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?