
ಬೆಂಗಳೂರು (ಫೆ.15): ಶಶಿಕಲಾ ನಟರಾಜನ್ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ನಡೆಸಲು ರಾಜ್ಯ ಸರ್ಕಾರ 5 ಕೊಟಿ ರೂ. ವ್ಯಯಿಸಿದೆಯೆಮದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಈ ಪ್ರಕರಣವನ್ನು ನಡೆಸುವ ಜವಾಬ್ದಾರಿ ಸುಪ್ರೀಂಕೋರ್ಟ್ ರಾಜ್ಯಕ್ಕೆ ವಹಿಸಿತ್ತು. ಅದರಂತೆ ಹಿರಿಯ ವಕೀಲ ಬಿ.ಬಿ.ಆಚಾರ್ಯರನ್ನು ನೇಮಿಸಿ ಕೇಸ್ ನಡೆಸಿದ್ದೇವೆ. ಕಾನೂನು ಇಲಾಖೆಯಿಂದ 5 ಕೋಟಿ ಖರ್ಚಾಗಿದೆಯೆಂದು ಅವರು ಹೇಳಿದ್ದಾರೆ.
ಈ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಬೇಕಾಗಿದೆ. ಎಲ್ಲಾ ಇಲಾಖೆಗಳ ಖರ್ಚು ಲೆಕ್ಕ ಹಾಕಿ ಪತ್ರ ಬರೆಯುತ್ತೇವೆ ಎಮದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.