
ಬೆಂಗಳೂರು[ಏ. 30] ಸಿಎಂ ಕುಮಾರಸ್ವಾಮಿ ಅವರ ತವರು ಜಿಲ್ಲೆಗಳಾದ ಹಾಸನ ಮತ್ತು ರಾಮನಗರ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೊದಲೆರಡು ಸ್ಥಾನ ಗಳಿಸಿವೆ. ಸೋಶಿಯಲ್ ಮೀಡಿಯಾ ಮಾತ್ರ ಇದಕ್ಕೆ ಸಂಬಂಧಿಸಿ ತನ್ನದೇ ಆದ ಪ್ರತಿಕ್ರಿಯೆ ನೀಡುತ್ತಿದೆ.
ಎನ್ . ಮಹೇಶ್ ಶಿಕ್ಷಣ ಸಚಿವ ಸ್ಥಾನ ತೊರೆದ ಮೇಲೆ ಆ ಖಾತೆ ಸಹ ಕುಮಾರಸ್ವಾಮಿ ಬಳಿಯೇ ಇದೆ. ಕುಮಾರಸ್ವಾಮಿಯವರ ತವರು ಜಿಲ್ಲೆಗಳಾದ ಹಾಸನ ಮತ್ತು ರಾಮನಗರದ ಮತ್ತು ರಾಮನಗರ ಸಾಧನೆ ಮಾಡಿರುವುದಕ್ಕೆ ಟ್ರೋಲಿಗರು HDK ಅವರನ್ನು ಎಳೆದು ತಂದಿದ್ದಾರೆ. ಕುಮಾರಸ್ವಾಮಿ ಹಿಂದೊಮ್ಮೆ ಕರಾವಳಿ ಜನರ ಕುರಿತಾಗಿ ಮಾತನಾಡಿದ್ದನ್ನು ಉಲ್ಲೇಖ ಮಾಡಿದ್ದಾರೆ.
SSLC ಫಲಿತಾಂಶ ಪ್ರಕಟ, ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ
ದ್ವಿತೀಯ ಪಿಯು ಫಲಿತಾಂಶದಲ್ಲಿ ಉಡುಪಿ ಮತ್ತು ಮಂಗಳೂರು ಅಗ್ರ ಸ್ಥಾನ ಕಾಯ್ದುಕೊಂಡಿದ್ದವು. ಆದರೆ SSLC ಫಲಿತಾಂಶದಲ್ಲಿ ಮಾತ್ರ ಕೊಂಚ ಕೆಳಗಿಳಿದಿವೆ. ಹಾಸನ ಮತ್ತು ರಾಮನಗರ ಟಾಪ್ ನಲ್ಲಿ ಕಾಣಿಸಿಕೊಂಡಿದ್ದು ಎರಡು ದಿಕ್ಕಿನಿಂದ ಟ್ರೋಲ್ ಆಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.