ಅನುರಾಗ್ ತಿವಾರಿ ಸಾವು; ಯಾವುದೇ ತನಿಖೆಗೆ ಸರ್ಕಾರ ಸಿದ್ಧ

Published : May 19, 2017, 05:53 PM ISTUpdated : Apr 11, 2018, 01:06 PM IST
ಅನುರಾಗ್ ತಿವಾರಿ ಸಾವು; ಯಾವುದೇ ತನಿಖೆಗೆ ಸರ್ಕಾರ ಸಿದ್ಧ

ಸಾರಾಂಶ

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದು ಯಾವುದೇ ತನಿಖೆಗೆ ಸರ್ಕಾರ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.  

ಬೆಂಗಳೂರು (ಮೇ.19): ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದು ಯಾವುದೇ ತನಿಖೆಗೆ ಸರ್ಕಾರ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.  

ಅನುರಾಗ್ ತಿವಾರಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದು ಆಹಾರ, ನಾಗರೀಕ ಸರಬರಾಜು ಇಲಾಖೆಯಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.  ಮೇ.17 ರ ಮುಂಜಾನೆ ಲಕ್ನೋದ ಹಜರತ್’ಗಂಜ್’ನ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಅನುರಾಗ್ ತಿವಾರಿ ಕರ್ನಾಟಕದ ಐಎಎಸ್ ಅಧಿಕಾರಿ. ಲಕ್ನೋದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಾರಣಗಳೇನು ಎಂದು ತಿಳಿದಿಲ್ಲ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಪೋಸ್ಸ್ ಮಾರ್ಟಂ ವರದಿ ಹೇಳುತ್ತದೆ. ಲಕ್ನೋ ಪೊಲೀಸರು ತನಿಖೆ ನಡೆಸಲಿ. ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಹಾರ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಅನುರಾಗ್ ತಿವಾರಿ ತನಿಖೆ ನಡೆಸುತ್ತಿದ್ದಾರೆಂದು ಅವರನ್ನು ಸಾಯಿಸಲಾಗಿದೆ ಎನ್ನುವ ಸಂಶಯವಿದೆಯಲ್ಲಾ ಎನ್ನುವ ಸುದ್ಧಿಗಾರರ ಪ್ರಶ್ನೆಗೆ, ಯಾರೋ ಹೇಳುತ್ತಾರೆಂದು ನೀವು ಹೀಗೆಲ್ಲಾ ಮಾತನಾಡಬೇಡಿ. ಪೊಲೀಸರು ತನಿಖೆ ನಡೆಸಲಿ. ಬಳಿಕ ಸತ್ಯ ಗೊತ್ತಾಗುತ್ತದೆ ಎಂದು ಸಿಎಂ ಹೇಳಿದರು.

ಆಹಾರ ಇಲಾಖೆಯಲ್ಲಿ ನಡೆಯುತ್ತಿದ್ದ 2 ಸಾವಿರ ಕೋಟಿ  ಅಕ್ರಮವನ್ನು ಬಯಲಿಗೆಳೆಯಲು ತಿವಾರಿ ರೆಡಿಯಾಗಿದ್ದರು. ಹಾಗಾಗಿ ಅವರನ್ನು ಹತ್ಯೆ ಮಾಡಿದ್ದಾರೆ.ಮುಖ್ಯಮಂತ್ರಿಯವರೇ ಅವರ ಸಾವಿಗೆ ನೇರ ಹೊಣೆ ಹೊರಬೇಕು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ತಿವಾರಿಯವರ ತಮ್ಮ ಮಯಾಂಕ್ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕಿಂಗ್ ನ್ಯೂಸ್; ಡಿ.26ರಿಂದಲೇ ಹೊಸ ದರಗಳು ಅನ್ವಯ
Hate Speech Bill: ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ