ವಂಚನೆಗೊಳಗಾದ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ

Published : Oct 18, 2018, 08:31 AM IST
ವಂಚನೆಗೊಳಗಾದ ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ

ಸಾರಾಂಶ

ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್‌ ಅವರಿಗೆ ಸೈಬರ್‌ ಕಳ್ಳರು .2 ಲಕ್ಷ ವಂಚಿಸಿರುವ ಕುತೂಹಲಕಾರಿ ಘಟನೆ ನಡೆದಿದೆ.

ಬೆಂಗಳೂರು :  ಬ್ಯಾಂಕ್‌ ಗ್ರಾಹಕ ಸೇವಾ ಕೇಂದ್ರದ ಸಿಬ್ಬಂದಿ ಸೋಗಿನಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ.ಎಂ.ಪ್ರಸಾದ್‌ ಅವರಿಗೆ ಸೈಬರ್‌ ಕಳ್ಳರು 2 ಲಕ್ಷ ರು. ವಂಚಿಸಿರುವ ಕುತೂಹಲಕಾರಿ ಘಟನೆ ನಡೆದಿದೆ. ಈ ಸಂಬಂಧ ಸಿಐಡಿ ಸೈಬರ್‌ ಕ್ರೈಂ ಠಾಣೆಗೆ ಡಿಜಿಪಿ ದೂರು ಸಲ್ಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

‘ನಾನು ಸೋಮವಾರ ಮಧ್ಯಾಹ್ನ 2ಕ್ಕೆ ಕಚೇರಿಯಲ್ಲಿದ್ದಾಗ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ತನ್ನನ್ನು ಬ್ಯಾಂಕ್‌ ಗ್ರಾಹಕರ ಸೇವಾ ಕೇಂದ್ರದ ಸಿಬ್ಬಂದಿ ಎಂದು ಪರಿಚಿಯಿಸಿಕೊಂಡ. ಬಳಿಕ ನಿಮ್ಮ ಕ್ರೆಡಿಟ್‌ (ಎಟಿಎಂ) ಕಾರ್ಡ್‌ ಅವಧಿ ಮುಗಿದಿದ್ದು, ಅದರ ನವೀಕರಣ ಮಾಡಬೇಕಿದೆ ಎಂದ. ಅಲ್ಲದೆ, ನನ್ನ ಎಟಿಎಂ ಕಾರ್ಡ್‌ ನಂಬರ್‌ ಸಹ ತಿಳಿಸಿ, ಬ್ಯಾಂಕ್‌ ಮಾಹಿತಿಯನ್ನು ಎಸ್‌ಎಂಎಸ್‌ ಕಳುಹಿಸುವಂತೆ ಕೋರಿದ. ಹಾಗೆ ಆತ ಮೊಬೈಲ್‌ ಸಂಖ್ಯೆಯನ್ನು ಕಳುಹಿಸಿದ್ದ ಎಂದು ಡಿಜಿಪಿ ಎ.ಎಂ.ಪ್ರಸಾದ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಈ ಹಂತದಲ್ಲಿ ಅಪರಿಚಿತನ ಮಾತು ನಂಬಿದ ನಾನು, ಆತನ ಸೂಚನೆಯಂತೆ ಬ್ಯಾಂಕ್‌ ವಿವರವನ್ನು ಎಸ್‌ಎಂಎಸ್‌ ಮಾಡಿದೆ. ಇದಾದ ಕೆಲವೇ ನಿಮಿಷದಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿರುವ ನನ್ನ ಖಾತೆಯಿಂದ ಎರಡು ಬಾರಿ ಒಟ್ಟು 2 ಲಕ್ಷ ಹಣವನ್ನು ಕಿಡಿಗೇಡಿಗಳು ಡ್ರಾ ಮಾಡಿದರು. ಹಣ ಡ್ರಾ ಮಾಡಿದ ಎಸ್‌ಎಂಎಸ್‌ ನೋಡಿದ ತಕ್ಷಣವೇ ಬ್ಯಾಂಕ್‌ ಅಧಿಕಾರಿಗಳನ್ನು ಸಂಪರ್ಕಿಸಿ ನನ್ನ ಖಾತೆಯ ವಹಿವಾಟು ಸ್ಥಗಿತಗೊಳಿಸಿದ್ದೆ. ಮರುದಿನ ಈ ಸಂಬಂಧ ಸಿಐಡಿ ಸೈಬರ್‌ ಕ್ರೈಂ ಠಾಣೆಗೆ ನಾನು ದೂರು ನೀಡಿದೆ. ಅದರಂತೆ ತನಿಖೆ ನಡೆಸುತ್ತಿರುವ ಸಿಬ್ಬಂದಿ, ಆರೋಪಿಗಳ ಪತ್ತೆ ಹಚ್ಚುವ ವಿಶ್ವಾಸವಿದೆ ಎಂದು ಡಿಜಿಪಿ ಹೇಳಿದ್ದಾರೆ.

2015ರಲ್ಲಿ ಅಂದಿನ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಅವರಿಗೆ ಇದೇ ರೀತಿ ಎಟಿಎಂ ಕಾರ್ಡ್‌ ನವೀಕರಣದ ನೆಪದಲ್ಲಿ ಸೈಬರ್‌ ಕಳ್ಳರು 10 ಸಾವಿರ ವಂಚಿಸಿದ್ದರು. ಬಳಿಕ ಈ ಪ್ರಕರಣದ ತನಿಖೆ ನಡೆಸಿದ ಸೈಬರ್‌ ಕ್ರೈಂ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ