ಪ್ರಯಾಣ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದ ಸಾರಿಗೆ ಸಚಿವ!

Published : May 25, 2019, 09:55 PM IST
ಪ್ರಯಾಣ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದ ಸಾರಿಗೆ ಸಚಿವ!

ಸಾರಾಂಶ

ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಅನ್ನೋ ಸುದ್ದಿಗೆ ಸಾರಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.   

ಬೆಂಗಳೂರು(ಮೇ.25): ಲೋಕಸಭಾ ಚುನಾವಣೆ ಫಲಿತಾಂಶದ  ಬೆನ್ನಲ್ಲೇ KSRTC ಸೇರಿದಂತೆ ಎಲ್ಲಾ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯಾಗಲಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಈ ಕುರಿತು ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ವದಂತಿಗೆ ಕಿವಿಗೊಡಬೇಡಿ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

 

 

ಡೀಸೆಲ್ ದರ ಏರಿಳಿತದಿಂದಾಗಿ ಸಾರಿಗೆ ಸಂಸ್ಥೆಗೆ ಈವರೆಗೆ 100 ಕೋಟಿ ರೂ.ನಷ್ಟವಾಗಿದೆ.  ಬಸ್ ಪ್ರಯಾಣ ದರ ಏರಿಸದಿದ್ದರೆ ಸಾರಿಗೆ ಸಂಸ್ಥೆಗಳು ನಷ್ಟಕ್ಕೆ ಸಿಲುಕಲಿವೆ. ಹೀಗಾಗಿ  ಪ್ರಯಾಣ ದರವನ್ನು ಶೇ. 20ರಷ್ಟು ಹೆಚ್ಚಿಸಲು ಸಿಎಂ ಕುಮಾರಸ್ವಾಮಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅನ್ನೋ ಸುದ್ದಿ ಹಬ್ಬಿತ್ತು. ಇದೀಗ ಸಚಿವರೇ ಸ್ಪಷ್ಟನೆ ನೀಡಿದ್ದು, ಪ್ರಯಾಣ ದರ 20%  ಏರಿಕೆಯಾಗುವ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಕ್ಷಿಣ ಸುಡಾನ್‌ನಲ್ಲಿ ಸೇವೆ: ಬೆಂಗಳೂರು ಮೂಲದ ಮೇಜರ್ ಸ್ವಾತಿಗೆ ವಿಶ್ವಸಂಸ್ಥೆ ಗೌರವ
ಲೈಸನ್ಸ್‌ ಇಲ್ಲದ ಚಾಲಕ ನೇಮಿಸಿದರೆ ಮಾಲೀಕರಿಗೆ ಸಂಕಷ್ಟ; ನ್ಯಾಯಾಲಯದಿಂದ ಮಹತ್ವದ ತೀರ್ಪು