
ಬೆಂಗಳೂರು: 2016ರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ಪಿ.ರಾಜೀವ್ ವಿರುದ್ಧ ಬಂಧನದ ವಾರಂಟ್ ಹೊರಡಿಸಿದೆ.
ಮಾಜಿ ಶಾಸಕ ಶಾಮಘಾಟ್ ಅವರಿಗೆ ಅವ್ಯಾಚ ಶಬ್ಧಗಳಿಂದ ಜಾತಿ ನಿಂದನೆ ಆರೋಪದ ಮೇಲೆ, ಶಾಸಕ ಪಿ.ರಾಜೀವ್ ಸೇರಿದಂತೆ ಅವರ ಬೆಂಬಲಿಗರ ವಿರುದ್ಧ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ವಿಚಾರಣೆಗೆ ಹಾಜರಾಗದ ಶಾಸಕ ರಾಜೀವ್ ವಿರುದ್ಧ ಇದೀಗ ಬೆಂಗಳೂರಿನ ವಿಶೇಷ ಕೋರ್ಟ್ ವಾರಂಟ್ ಹೊರಡಿಸಿದೆ.
ಏನಿದು ಪ್ರಕರಣ:
ಶಾಸಕ ಪಿ.ರಾಜೀವ್ ಸಕ್ಕರೆ ಕಾರ್ಖಾನೆಗಳಿಂದ ಹಣ ಪಡೆದು ರೈತರ ಪರವಾಗಿ ನಿಲ್ಲುವುದನ್ನು ಬಿಟ್ಟಿದ್ದಾರೆ ಎಂದು ಕುಡಚಿ ಕ್ಷೇತ್ರದ ಮಾಜಿ ಶಾಸಕ ಶಾಮ ಘಾಟಗೆ 2016ರಲ್ಲಿ ಆರೋಪ ಮಾಡಿದ್ದರು. ಅದಕ್ಕೆ ಪ್ರತಿಯಾಗಿ, ಆ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಲು ಶಾಸಕ ರಾಜೀವ್ ನೇರವಾಗಿ ಶಾಮ ಘಾಟಗೆ ಮನೆಗೆ ಹೋಗಿದ್ದರು. ಆ ವೇಳೆ, ಶಾಮ ಘಾಟಗೆ ಮನೆಯಲ್ಲಿ ಇಲ್ಲದಿದ್ದರೂ, ಕುಟುಂಬ ಸದಸ್ಯರೊಂದಿಗೆ ಪಿ. ರಾಜೀವ್ ವಾಗ್ವಾದ ನಡೆದಿತ್ತು. ಬಳಿಕ ಶಾಸಕ ಪಿ.ರಾಜೀವ್ ಸೇರಿದಂತೆ ಅವರ ಬೆಂಬಲಿಗರ ವಿರುದ್ಧ ಘಾಟಗೆ ಕುಟುಂಬ ಕುಡಚಿ ಪೊಲೀಸ್ ಠಾಣೆಯಲ್ಲಿ ಅವ್ಯಾಚ ಶಬ್ಧಗಳಿಂದ ನಿಂದನೆ ಸೇರಿದಂತೆ ಜಾತಿ ನಿಂದನೆ ಪ್ರಕರಣ ದಾಖಲಿಸಿತ್ತು.
ಪ್ರಕರಣ ದಾಖಲಾದರೂ, ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಇದೀಗ ವಾರಂಟ್ ಜಾರಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.