ಕರ್ನಾಟಕ ಮಹಿಳಾ ಸಾಧಕಿಯರ ಟ್ರೋಫಿ ಅನಾವರಣ

Published : May 05, 2018, 11:00 PM ISTUpdated : May 07, 2018, 02:50 PM IST
ಕರ್ನಾಟಕ ಮಹಿಳಾ ಸಾಧಕಿಯರ ಟ್ರೋಫಿ ಅನಾವರಣ

ಸಾರಾಂಶ

ಕರ್ನಾಟಕ ಮಹಿಳಾ ಸಾಧಕಿ ಪ್ರಶಸ್ತಿಯ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅವರ್ಡ್ ಟ್ರೋಫಿಯನ್ನು ಅನಾವರಣ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರಕ್ಕೂ ಹೆಚ್ಚು ಮಹಿಳಾ ಸಾಧಕರು ಭಾಗಿಯಾಗಿದ್ದರು.

ಬೆಂಗಳೂರು[ಮೇ.05]: ಕರ್ನಾಟಕ ಮಹಿಳಾ ಸಾಧಕಿ ಪ್ರಶಸ್ತಿಯ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅವರ್ಡ್ ಟ್ರೋಫಿಯನ್ನು ಅನಾವರಣ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರಕ್ಕೂ ಹೆಚ್ಚು ಮಹಿಳಾ ಸಾಧಕರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್’ನ ಸಿನಿಮಾ ವಿಭಾಗದ ಮುಖ್ಯಸ್ಥೆ ಸುಗುಣ ಸೇರಿದಂತೆ ಹಲವು ಗಣ್ಯರು ತಮ್ಮ ಸಾಧನೆಯ ಅನುಭವ ಹಂಚಿಕೊಂಡರು. ಗೈಡ್ ಆಫ್ ಹ್ಯೂಮೆನ್ ಅಚಿವರ್ ಸಂಸ್ಥೆ ನೀಡುವ ಈ ಪ್ರಶಸ್ತಿಯು ಒಟ್ಟು 18 ಕ್ಷೇತ್ರಗಳಲ್ಲಿ ನೀಡಲಾಗುತ್ತಿದೆ. ಈಗಾಗಲೇ ನೂರಕ್ಕೂ ಹೆಚ್ಚು ಸಾಧಕರು ನಾಮನಿರ್ದೇಶಿಸಿದ್ದು, ಜೂನ್ ಕೊನೆ ವಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 

ನಟಿ ಸ್ಪೂರ್ತಿ ವಿಶ್ವಾಸ್ ಹಾಗೂ ತಂಡ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಈ ವಿಶೇಷ ಪ್ರಶಸ್ತಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?