ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡೇ ಮಾಡ್ತೀವಿ: ಮೋದಿ

Published : Feb 04, 2018, 05:32 PM ISTUpdated : Apr 11, 2018, 01:00 PM IST
ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡೇ ಮಾಡ್ತೀವಿ: ಮೋದಿ

ಸಾರಾಂಶ

 'ಕರ್ನಾಟಕದ ರಾಜಧಾನಿಯ ಉತ್ಸವ ಇದು. ನಿಮ್ಮ ಈ ಉತ್ಸಾಹ ಹೇಳ್ತಾ ಇದೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಆರಂಭವಾಗಿದೆ ಅಂತಾ. ಕರ್ನಾಟಕ ವನ್ನು ಕಾಂಗ್ರೆಸ್ ಮುಕ್ತ ಮಾಡೇ ಮಾಡ್ತೀವಿ,' ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು:  'ಕರ್ನಾಟಕದ ರಾಜಧಾನಿಯ ಉತ್ಸವ ಇದು. ನಿಮ್ಮ ಈ ಉತ್ಸಾಹ ಹೇಳ್ತಾ ಇದೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹೊರ ಹೋಗುವ ಕೌಂಟ್ ಡೌನ್ ಆರಂಭವಾಗಿದೆ ಅಂತಾ. ಕರ್ನಾಟಕ ವನ್ನು ಕಾಂಗ್ರೆಸ್ ಮುಕ್ತ ಮಾಡೇ ಮಾಡ್ತೀವಿ,' ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

'ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ನಡೆಯುತ್ಯಿದ್ದೇವೆ. ಬಡವರ ಹಿಂದುಳಿದ ವರ್ಗಗಳ ಉದ್ಧಾರವೇ ನಮ್ಮ ಗುರಿ.  ಜನಧನ್ ಯೋಜನೆ ಅಡಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಬ್ಯಾಂಕ್ ಖಾತೆ ಆರಂಭಿಸಿದ್ದಾರೆ. 

ಉಜ್ವಲ ಯೋಜನೆ ಅಡಿಯಲ್ಲಿ ಎಂಟೂವರೆ ಲಕ್ಷ ಜನ ಮಹಿಳೆಯರು ಗ್ಯಾಸ್ ಬಳಸುತ್ತಿದ್ದಾರೆ. ಪ್ರತಿ ಮನೆಗೆ ಬೆಳಕು ನೀಡುವ ಉದ್ದೇಶದಿಂದ ಸೌಭಾಗ್ಯ ಯೋಜನೆ ಜಾರಿ ತಂದಿದ್ದೇವೆ,' ಎಂದು ಹೇಳಿದರು. 

'ಒಂದು ದಿನ ಬೆಂಗಳೂರಿಗೆ ಕರೆಂಟ್ ಇಲ್ಲದಿದ್ದರೆ ಬದುಕಲು ಸಾದ್ಯವಿಲ್ಲ.  ಆದರೆ ಏಳು ಲಕ್ಷ ಮನೆಗಳು ಕರ್ನಾಟಕದಲ್ಲಿ ಇನ್ನೂ ವಿದ್ಯುತ್ ಇಲ್ಲದೇ ಬದುಕುತ್ತಿವೆ. ಎಲ್ಲರ ಮನೆಗೂ ವಿದ್ಯುತ್ ಸಂಪರ್ಕ ನೀಡುವ ಯೋಜನೆಯನ್ನು ನಾವು ಜಾರಿಗೊಳಿಸಿದ್ದೇವೆ,,' ಎಂದರು.

'ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರಿಗೆ ಸ್ವರ್ಗವಾಗಿದೆ,' ಎಂದ ರಾಜ್ಯ ಸರಕಾರವನ್ನು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!