ಸಚಿವೆಗೆ ಕಿವಿ, ಮೂಗು ಕತ್ತರಿಸುವುದಾಗಿ ಬೆದರಿಕೆ

Published : Jun 14, 2018, 01:25 PM IST
ಸಚಿವೆಗೆ ಕಿವಿ, ಮೂಗು ಕತ್ತರಿಸುವುದಾಗಿ ಬೆದರಿಕೆ

ಸಾರಾಂಶ

 ಈ ಹಿಂದೇ ಪದ್ಮಾವತ್  ಸೇರಿದಂತೆ ಅನೇಕ ರೀತಿಯ ವಿಚಾರಗಳ ಸಂಬಂಧ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದ ಕರ್ಣಿ ಸೇನೆ ಇದೀಗ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ.

ಜೈಪುರ್ : ಈ ಹಿಂದೇ ಪದ್ಮಾವತ್  ಸೇರಿದಂತೆ ಅನೇಕ ರೀತಿಯ ವಿಚಾರಗಳ ಸಂಬಂಧ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದ ಕರ್ಣಿ ಸೇನೆ ಇದೀಗ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ. 

ರಾಜಸ್ಥಾನ ಶಿಕ್ಷಣ ಸಚಿವೆ ಕಿರಣ್ ಮಹೇಶ್ವರಿ ಅವರಿಗೆ ಕರ್ಣಿ ಸೇನೆಯು ಸೇನೆಯು ಕಿವಿ, ಮೂಗುಗಳನ್ನು ಕತ್ತರಿಸುವುದಾಗಿ ಬೆದರಿಕೆ ಒಡ್ಡಿದೆ. ರಜಪೂತ ಸಮುದಾಯದ ವಿರುದ್ಧ ಅವರು ಹೇಳಿಕೆಗೆ ನೀಡಿದ್ದಾರೆ ಎಂದು ಇಂತಹ ಹೇಳಿಕೆಯೊಂದನ್ನು ನೀಡಿರುವುದು ಭಾರಿ ವಿವಾದಕ್ಕೆ ಎಡೆ ಮಾಡಕೊಟ್ಟಿದೆ. 

ಕರ್ಣಿ  ಸೇನಾ ಮುಖಂಡ ಮಹಿಪಾಲ್ ಸಿಂಗ್ ಮಾತನಾಡಿ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಇಲಿಗಳು ಬಿಲ ಬಿಟ್ಟು ಹೊರ ಬರುತ್ತವೆ ಎನ್ನುವ ಹೇಳಿಕೆಯನ್ನು ಮಹೇಶ್ವರಿ ನೀಡಿದ್ದಾರೆ.  ಇದಕ್ಕೆ ಅವರು ಕ್ಷಮೆ ಕೇಳಬೇಕು.

ಇಂತಹ ಹೇಳಿಕೆಗಳನ್ನು ನೀಡುವ ಮೊದಲು ಈ ಹಿಂದೆ ಪದ್ಮಾವತ್ ವಿಚಾರದಲ್ಲಿ ದೀಪಿಕಾ ಪಡುಕೋಣೆಗೆ ಆದ ಸ್ಥಿತಿಯನ್ನು ನೆನೆಸಿಕೊಳ್ಳಬೇಕು ಎಂದಿದ್ದಾರೆ. ಅವರ ಕಿವಿ, ಮೂಗನ್ನು ಕತ್ತರಿಸಲಾಗುವುದು ಎಂದು ಬೆದರಿಕೆ ಒಡ್ಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!
ಶಕ್ತಿ ಯೋಜನೆ ಇದ್ದರೂ, ರಾಜ್ಯದ 1800 ಹಳ್ಳಿಗಳಿಗೆ ಇನ್ನೂ ಬಸ್ ಸಂಪರ್ಕವೇ ಇಲ್ಲ!