
ನವದೆಹಲಿ (ಆ.14): ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕಾರ್ತಿ ಚಿದಂಬರಂ ಸಿಬಿಐ ತನಿಖೆಯನ್ನು ಎದುರಿಸಲೇಬೇಕು. ಸಿಬಿಐ ವಿಚಾರಣೆಗೆ ಹಾಜರಾಗುವ ಮುನ್ನ ಯಾವುದೇ ಕಾರಣಕ್ಕೂ ವಿದೇಶಕ್ಕೆ ಹಾರುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.
ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಲುಕೌಟ್ ನೋಟಿಸ್’ಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ನನ್ನ ಮೇಲೆ ಮಾಡಿರುವ ಭ್ರಷ್ಟಾಚಾರ ಆರೋಪವು ರಾಜಕೀಯ ಪ್ರೇರಿತವಾದದ್ದು ಎಂದು ಕಾರ್ತಿ ಚಿದಂಬರಂ ಆರೋಪಿಸಿದ್ದರು. ಮೇ.18 ಮತ್ತು ಜು.21 ರಂದು ಸಿಬಿಯ ಸಮನ್ಸ್ ಕೂಡಾ ನೀಡಿತ್ತು. ಇದನ್ನು ಪ್ರಶ್ನಿಸಿ ಕಾರ್ತಿ ಚಿದಂಬರಂ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯದ ತೀರ್ಪು ಬರುವವರೆಗೆ ಸಿಬಿಐ ಕಾಯಬೇಕು, ತನಿಖೆಗೆ ಮುಂದಾಗಬಾರದು ಎಂದು ಕೋರ್ಟ್’ಗೆ ಕೋರಿದ್ದರು.
ನನಗೆ ವಿದೇಶಕ್ಕೆ ಹೋಗುವ ಯೋಚನೆಯಿಲ್ಲ. ವಿಚಾರಣೆ ಚೆನ್ನೈ ಅಥವಾ ದೆಹಲಿ ಎಲ್ಲೇ ನಡೆಯಲಿ, ನಾನು ಭಾಗವಹಿಸುತ್ತೇನೆ ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ. ಹಿಂದೊಮ್ಮೆ ನಾವು ಕೆಲವರಿಗೆ ವಿದೇಶಕ್ಕೆ ಹೋಗಲು ಅನುಮತಿ ನೀಡಿದ್ದೆವು. ಆದರೆ ವಾಪಸ್ಸಾಗಲೇ ಇಲ್ಲ. ಹಾಗಾಗಿ ಈ ಬಾರಿ ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಮುಖ್ಯ ನ್ಯಾ. ಜೆಎಸ್ ಖೇಹರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.