ಕೊಡಗಿನಲ್ಲಿ ಕಾರ್ತಿ ಚಿದುಗೆ ಅನಾರೋಗ್ಯ: ಆಸ್ಪತ್ರೆಗೆ

By Suvarna Web DeskFirst Published Sep 16, 2017, 11:53 PM IST
Highlights

ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿರುವ ಸ್ನೇಹಿತನ ಎಸ್ಟೇಟ್‌ಗೆ ಬಂದಿದ್ದ ಕಾರ್ತಿ ಅವರಿಗೆ ಶನಿವಾರ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡು ಅನಾರೋಗ್ಯಕ್ಕೀಡಾಗಿದ್ದರು.

ಮಡಿಕೇರಿ(ಸೆ.16): ಕೇಂದ್ರ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಶನಿವಾರ ಕೊಡಗು ಜಿಲ್ಲೆ ವಿರಾಜಪೇಟೆ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿರುವ ಸ್ನೇಹಿತನ ಎಸ್ಟೇಟ್‌ಗೆ ಬಂದಿದ್ದ ಕಾರ್ತಿ ಅವರಿಗೆ ಶನಿವಾರ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಕೂಡಲೇ ಅವರನ್ನು ವಿರಾಜಪೇಟೆಯ ಖಾಸಗಿ ನರ್ಸಿಂಗ್ ಹೋಂವೊಂದಕ್ಕೆ ದಾಖಲಿಸಲಾಯಿತು. ಅಲ್ಲಿ ಎರಡು ಗಂಟೆಗಳ ಕಾಲ ಡಾ.ಕಾರ್ಯಪ್ಪ ಅವರಿಂದ ಚಿಕಿತ್ಸೆ ಪಡೆದುಕೊಂಡ ಅವರು ಬಳಿಕ ಚೆನ್ನೈಗೆ ವಾಪಸಾಗಿದ್ದಾರೆ.

click me!