
ಮಡಿಕೇರಿ(ಸೆ.16): ಕೇಂದ್ರ ಮಾಜಿ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಶನಿವಾರ ಕೊಡಗು ಜಿಲ್ಲೆ ವಿರಾಜಪೇಟೆ ನಡೆದಿದೆ. ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿರುವ ಸ್ನೇಹಿತನ ಎಸ್ಟೇಟ್ಗೆ ಬಂದಿದ್ದ ಕಾರ್ತಿ ಅವರಿಗೆ ಶನಿವಾರ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಕೂಡಲೇ ಅವರನ್ನು ವಿರಾಜಪೇಟೆಯ ಖಾಸಗಿ ನರ್ಸಿಂಗ್ ಹೋಂವೊಂದಕ್ಕೆ ದಾಖಲಿಸಲಾಯಿತು. ಅಲ್ಲಿ ಎರಡು ಗಂಟೆಗಳ ಕಾಲ ಡಾ.ಕಾರ್ಯಪ್ಪ ಅವರಿಂದ ಚಿಕಿತ್ಸೆ ಪಡೆದುಕೊಂಡ ಅವರು ಬಳಿಕ ಚೆನ್ನೈಗೆ ವಾಪಸಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.