
ನವದೆಹಲಿ (ಮೇ.18): ಅಕ್ರಮ ವ್ಯವಹಾರ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂರವರನ್ನು ತನಿಖೆ ನಡೆಸಲು ಸಿಬಿಐ ಹುಡುಕುತ್ತಿರುವಾಗಲೇ ಕಾರ್ತಿ ಚಿದಂಬರಂ ಸ್ನೇಹಿತನೊಂದಿಗೆ ಲಂಡನ್ ಗೆ ಪರಾರಿಯಾಗಿದ್ದಾರೆ ಎಂದು ವಿಮಾನನಿಲ್ದಾಣ ಮೂಲಗಳು ತಿಳಿಸಿವೆ.
2007 ರಲ್ಲಿ ಪಿ ಚಿದಂಬರಂ ಹಣಕಾಸು ಮಂತ್ರಿಯಾಗಿದ್ದಾಗ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ಒಡೆತನದ ಐಎನ್’ಎಕ್ಸ್ ಮೀಡಿಯಾಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಿಂದ ಅನುಮತಿ ಪಡೆಯುವಲ್ಲಿ ಅಕ್ರಮವೆಸಗಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಸಸಿಬಿಐ ಕಾರ್ತಿ ಚಿದಂಬರಂ ಮೇಲೆ ಪ್ರಕರಣ ದಾಖಲಿಸಿದೆ. ಈ ಬಗ್ಗೆ ವಿಚಾರಣೆ ನಡೆಸಲು ಅವರಿಗೆ ಸಂಬಂಧಪಟ್ಟ ಜಾಗಗಳಲ್ಲೆಲ್ಲಾ ಸಿಬಿಐ ಹುಡುಕಾಟ ನಡೆಸಿದೆ. ಸಿಬಿಐ ಕಣ್ಣು ತಪ್ಪಿಸಿ ಕಾರ್ತಿ ಚಿದಂಬರಂ ಲಂಡನ್’ಗೆ ಪರಾರಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.