ಜಯಾರಂತೆ ಕರುಣಾಗೂ ಮರೀನಾ ಬೀಚ್‌ನಲ್ಲಿ ಜಾಗ ಸಿಗಲಿ: ರಾಹುಲ್ ಗಾಂಧಿ

Published : Aug 08, 2018, 12:06 AM ISTUpdated : Aug 08, 2018, 12:55 AM IST
ಜಯಾರಂತೆ ಕರುಣಾಗೂ ಮರೀನಾ ಬೀಚ್‌ನಲ್ಲಿ ಜಾಗ ಸಿಗಲಿ: ರಾಹುಲ್ ಗಾಂಧಿ

ಸಾರಾಂಶ

ಜಯಾಲಲಿತಾರಂತೆ ಕರುಣಾನಿಧಿ  ತಮಿಳು ಜನರ ಧ್ವನಿಯಾಗಿದ್ದರು. ಆ ಧ್ವನಿಗೆ ಮರೀನಾ ಬೀಚ್ ನಲ್ಲಿ ಸ್ಥಳ ಸಿಗಬೇಕು. ಈ ದುಖ:ಕರ ಸನ್ನಿವೇಶದಲ್ಲಿ ತಮಿಳು ನಾಯಕರು ಹೃದಯವೈಶಾಲ್ಯ ಮೆರೆಯುತ್ತಾರೆ ಎಂಬ ವಿಶ್ವಾಸ ತನಗಿದೆಯೆಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಒಂದು ಕಡೆ ಮದ್ರಾಸ್ ಹೈಕೋರ್ಟ್  ಅಂತ್ಯಸಂಸ್ಕಾರ ನಡೆಸುವ ಸ್ಥಳದ ಬಗ್ಗೆ ವಿಚಾರಣೆ ಆರಂಭಿಸಿದ್ದು, ಇನ್ನೊಂದು ಕಡೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಜಯಾಲಲಿತಾರಂತೆ ಕರುಣಾನಿಧಿಯವರಿಗೂ ಮರೀನಾ ಬೀಚ್ ನಲ್ಲಿರುವ ಅಣ್ಣಾ ಸ್ಮಾರಕದ ಬಳಿ ಹೂಳಲು ಜಾಗ ಸಿಗಬೇಕು ಎಂದು ಹೇಳಿದ್ದಾರೆ.

ಜಯಾಲಲಿತಾರಂತೆ ಕರುಣಾನಿಧಿ  ತಮಿಳು ಜನರ ಧ್ವನಿಯಾಗಿದ್ದರು. ಆ ಧ್ವನಿಗೆ ಮರೀನಾ ಬೀಚ್ ನಲ್ಲಿ ಸ್ಥಳ ಸಿಗಬೇಕು. ಈ ದುಖ:ಕರ ಸನ್ನಿವೇಶದಲ್ಲಿ ತಮಿಳು ನಾಯಕರು ಹೃದಯವೈಶಾಲ್ಯ ಮೆರೆಯುತ್ತಾರೆ ಎಂಬ ವಿಶ್ವಾಸ ನನಗಿದೆಯೆಂದು ಅವರು ಹೇಳಿದ್ದಾರೆ.

ತಮಿಳುನಾಡು ಸರ್ಕಾರ ಮರೀನಾ ಬೀಚ್ ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನಿರಾಕರಿಸಿತ್ತು.  ಆರೆಸ್ಸೆಸ್ ಕೂಡಾ ಡಿಎಂಕೆಯ ನಡೆಯನ್ನು ವಿರೋಧಿಸಿದ್ದು, ಮರೀನಾ ಬೀಚ್ ನಲ್ಲಿ ಕಲೈನಾರ್ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಬಾರದೆಂದು ಅದು ಆಗ್ರಹಿಸಿತ್ತು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹೆಸರಿಗೆ ಅಮೆರಿಕಾದಲ್ಲಿ 'ಕೀರ್ತಿ' ತಂದ ಅನೂಯಾ ಸ್ವಾಮಿ.. ಯಾರು ಈ 'ಪಂಕಜ'..?!
ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!