
ಚೆನ್ನೈ(ಡಿ. 01): ತಮಿಳುನಾಡಿನ ಮಾಜಿ ಸಿಎಂ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಇಂದು ಆಸ್ಪತ್ರೆಗೆ ದಾಖಲಾಗಿರುವ ಸಂಗತಿ ವರದಿಯಾಗಿದೆ. ಈಗ್ಗೆ ಕೆಲವಾರು ದಿನಗಳಿಂದಲೂ ಕರುಣಾನಿಧಿಯವರು ಅಲರ್ಜಿ ಸಮಸ್ಯೆಗಳಿಂದ ಬಳಲುತ್ತಿದ್ದರೆನ್ನಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಡಿಎಂಕೆ ಮೂಲಗಳು ತಿಳಿಸಿರುವುದಾಗಿ ಎನ್'ಡಿಟಿವಿ ವರದಿ ಮಾಡಿದೆ.
ಕಾವೇರಿ ಆಸ್ಪತ್ರೆಯ ವೈದ್ಯರೂ ಕೂಡ ಕರುಣಾನಿಧಿಯವರ ಆರೋಗ್ಯದಲ್ಲಿ ಗಂಭೀರ ಪರಿಸ್ಥಿತಿ ಇಲ್ಲದಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಕರುಣಾನಿಧಿಯವರು ಇನ್ನು ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿರಬಹುದೆಂಬ ಮಾಹಿತಿ ಲಭಿಸಿದೆ.
ಕಳೆದ ಒಂದು ತಿಂಗಳಿನಿಂದ ಡಿಎಂಕೆ ಮುಖ್ಯಸ್ಥರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕರುಣಾನಿಧಿಯವರಿಗೆ ವಿಶ್ರಾಂತಿಯ ಅಗತ್ಯವಿದೆಯೆಂದು ವೈದ್ಯರು ಹೇಳಿದ್ದು, ಯಾರೂ ಕೂಡ ಅವರನ್ನು ಭೇಟಿಯಾಗಬಾರದೆಂದು ಪಕ್ಷವು ಕಳೆದ ತಿಂಗಳು ಹೇಳಿಕೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.