ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅಮಾನತು

Published : Dec 12, 2016, 04:43 PM ISTUpdated : Apr 11, 2018, 01:03 PM IST
ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅಮಾನತು

ಸಾರಾಂಶ

ಭ್ರಷ್ಟ ಅಧಿಕಾರಿ ಭೀಮಾನಾಯ್ಕ ರಾಜ್ಯದ ಹಲವೆಡೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ನಾಗೇಶ್ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಇದಲ್ಲದೇ ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಖರೀದಿಸಿದ್ದಾರೆ. ಭೀಮಾನಾಯಕ್​ ಬ್ಲ್ಯಾಕ್​ &ವೈಟ್​ ದಂಧೆಯಲ್ಲಿ ತೊಡಗಿದ್ದಾರೆ. ರೆಡ್ಡಿ ಮಗಳ ಮದುವೆಗೂ ಕಪ್ಪು ಹಣ ಬಿಳಿಯಾಗಿಸಿಕೊಟ್ಟಿದ್ದಾರೆ ಎಂದು ಭೀಮಾನಾಯ್ಕವಿರುದ್ಧ ಡ್ರೈವರ್ ರಮೇಶ್ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಬೆಂಗಳೂರು(ಡಿ.12): ಕಾರು ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಭೂಸ್ವಾಧೀನ ಅಧಿಕಾರಿ ಭೀಮಾನಾಯ್ಕ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಭೀಮಾ ನಾಯ್ಕ್ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ನಿನ್ನೆ ಕಲಬುರಗಿಯಲ್ಲಿ ಬಂಧಿಸಲಾಗಿತ್ತು. ಆರೋಪಿಗಳಾದ ಭೀಮಾನಾಯ್ಕ್ ಹಾಗೂ ಮಹಮದ್ ಅವರನ್ನು 5 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಲು ಮದ್ದೂರಿನ ಜೆಎಂಎಫ್​ಸಿ ನ್ಯಾಯಾಧೀಶ ಪ್ರಕಾಶ್​ ಅವರು ಆದೇಶಿಸಿದ್ದಾರೆ.

ಭ್ರಷ್ಟ ಅಧಿಕಾರಿ ಭೀಮಾನಾಯ್ಕ ರಾಜ್ಯದ ಹಲವೆಡೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ನಾಗೇಶ್ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಇದಲ್ಲದೇ ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ

ಖರೀದಿಸಿದ್ದಾರೆ. ಭೀಮಾನಾಯಕ್​ ಬ್ಲ್ಯಾಕ್​ &ವೈಟ್​ ದಂಧೆಯಲ್ಲಿ ತೊಡಗಿದ್ದಾರೆ. ರೆಡ್ಡಿ ಮಗಳ ಮದುವೆಗೂ ಕಪ್ಪು ಹಣ ಬಿಳಿಯಾಗಿಸಿಕೊಟ್ಟಿದ್ದಾರೆ ಎಂದು ಭೀಮಾನಾಯ್ಕವಿರುದ್ಧ ಡ್ರೈವರ್ ರಮೇಶ್ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿ ಭೀಮಾನಾಯ್ಕ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಸಿಬಿಗೆ ನೀಡಿದ ದೂರಿನಲ್ಲಿ ನಾಗೇಶ್ ಆಗ್ರಹಿಸಿದ್ದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ